ಬ್ರೇಕಿಂಗ್ ನ್ಯೂಸ್
13-04-23 03:07 pm Udupi Correspondent ಕರಾವಳಿ
ಉಡುಪಿ, ಎ.13: ಮಂಗಳೂರಿನಿಂದ ಕೊಲ್ಲೂರಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿರೂರಿನ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಾಗಲೇ ಪರಿಸರದಲ್ಲಿ ಮುಳಿ ಹುಲ್ಲಿಗೆ ಬೆಂಕಿ ಹತ್ತಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಕರಾವಳಿಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಕೊಲ್ಲೂರಿಗೆ ತೆರಳಲು ಕಾಪ್ಟರ್ ನಲ್ಲಿ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿದ್ದಾರೆ. ಹೆಲಿಕಾಪ್ಟರ್ ಇಳಿಯುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿದ್ದು ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆದರೆ ವಿಐಪಿ ವ್ಯಕ್ತಿ ಬರುವ ಸಂದರ್ಭದಲ್ಲಿ ಹೆಲಿಪ್ಯಾಡ್ ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಭದ್ರತಾ ಲೋಪ ಅನ್ನುವಂತಾಗಿದೆ.



ಮುಖ್ಯಮಂತ್ರಿ ಮೊದಲಿಗೆ ಮಂಗಳೂರಿನಿಂದ ವಾಹನದಲ್ಲಿ ಕೊಲ್ಲೂರಿಗೆ ಬರಲಿದ್ದಾರೆ ಎಂಬ ಮಾಹಿತಿ ಉಡುಪಿ ಜಿಲ್ಲಾಡಳಿತಕ್ಕೆ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಎಂ ಹೆಲಿಕಾಪ್ಟರ್ನಲ್ಲಿ ಬರುವುದು ಖಾತ್ರಿಯಾಗಿದೆ. ಶಿರೂರಿನ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಆಗಲು ರೆಡಿ ಮಾಡಲಾಗಿತ್ತು. ತರಾತುರಿಯಲ್ಲಿ ನಿರ್ಧಾರ ಆಗಿದ್ದರಿಂದ ಜಾಗದ ಬಳಿ ಬೆಳೆದಿದ್ದ ಹುಲ್ಲುಗಳನ್ನು ಕತ್ತರಿಸಿರಲಿಲ್ಲ. ಪರಿಣಾಮ ಹೆಲಿಕಾಪ್ಟರ್ ರೆಕ್ಕೆಯ ಗಾಳಿಯಿಂದಾಗಿ ಬಿಸಿಲಿಗೆ ಕಾದಿದ್ದ ಮುಳಿ ಹುಲ್ಲಿಗೆ ಬೆಂಕಿ ಹರಡಿದೆ. ಹೊಗೆಯೊಂದಿಗೆ ಬೆಂಕಿ ಹೊತ್ತಿಕೊಂಡಿದ್ದು ಒಂದು ಕ್ಷಣ ಅಲ್ಲಿದ್ದ ಭದ್ರತಾ ಸಿಬಂದಿ ಅಚ್ಚರಿಗೊಳ್ಳುವಂತಾಯ್ತು. ಆದರೆ ಬೆಂಕಿ ಕಾಣಿಸಿಕೊಳ್ಳುವಷ್ಟರಲ್ಲಿ ಮುಖ್ಯಮಂತ್ರಿ ಅಲ್ಲಿಂದ ಇಳಿದು ವಾಹನದಲ್ಲಿ ಹೋಗಿಯಾಗಿತ್ತು. ಎಸ್ಕಾರ್ಟ್ ವಾಹನವೂ ಹೋದ ನಂತರ ಬೆಂಕಿ ಕಾಣಿಸಿದ್ದು ಸಿಬಂದಿ ಕೂಡಲೇ ನಂದಿಸಿದ್ದಾರೆ.
A minor fire was noticed close to Are Shiroor helipad, near Baindoor in Udupi district, before Karnataka Chief Minister Basavaraj Bommai’s helicopter was to land, on April 13. Fire and Emergency Services personnel put off the fire immediately.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am