ಬ್ರೇಕಿಂಗ್ ನ್ಯೂಸ್
13-04-23 03:07 pm Udupi Correspondent ಕರಾವಳಿ
ಉಡುಪಿ, ಎ.13: ಮಂಗಳೂರಿನಿಂದ ಕೊಲ್ಲೂರಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿರೂರಿನ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಾಗಲೇ ಪರಿಸರದಲ್ಲಿ ಮುಳಿ ಹುಲ್ಲಿಗೆ ಬೆಂಕಿ ಹತ್ತಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಕರಾವಳಿಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಕೊಲ್ಲೂರಿಗೆ ತೆರಳಲು ಕಾಪ್ಟರ್ ನಲ್ಲಿ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿದ್ದಾರೆ. ಹೆಲಿಕಾಪ್ಟರ್ ಇಳಿಯುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿದ್ದು ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆದರೆ ವಿಐಪಿ ವ್ಯಕ್ತಿ ಬರುವ ಸಂದರ್ಭದಲ್ಲಿ ಹೆಲಿಪ್ಯಾಡ್ ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಭದ್ರತಾ ಲೋಪ ಅನ್ನುವಂತಾಗಿದೆ.



ಮುಖ್ಯಮಂತ್ರಿ ಮೊದಲಿಗೆ ಮಂಗಳೂರಿನಿಂದ ವಾಹನದಲ್ಲಿ ಕೊಲ್ಲೂರಿಗೆ ಬರಲಿದ್ದಾರೆ ಎಂಬ ಮಾಹಿತಿ ಉಡುಪಿ ಜಿಲ್ಲಾಡಳಿತಕ್ಕೆ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಎಂ ಹೆಲಿಕಾಪ್ಟರ್ನಲ್ಲಿ ಬರುವುದು ಖಾತ್ರಿಯಾಗಿದೆ. ಶಿರೂರಿನ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಆಗಲು ರೆಡಿ ಮಾಡಲಾಗಿತ್ತು. ತರಾತುರಿಯಲ್ಲಿ ನಿರ್ಧಾರ ಆಗಿದ್ದರಿಂದ ಜಾಗದ ಬಳಿ ಬೆಳೆದಿದ್ದ ಹುಲ್ಲುಗಳನ್ನು ಕತ್ತರಿಸಿರಲಿಲ್ಲ. ಪರಿಣಾಮ ಹೆಲಿಕಾಪ್ಟರ್ ರೆಕ್ಕೆಯ ಗಾಳಿಯಿಂದಾಗಿ ಬಿಸಿಲಿಗೆ ಕಾದಿದ್ದ ಮುಳಿ ಹುಲ್ಲಿಗೆ ಬೆಂಕಿ ಹರಡಿದೆ. ಹೊಗೆಯೊಂದಿಗೆ ಬೆಂಕಿ ಹೊತ್ತಿಕೊಂಡಿದ್ದು ಒಂದು ಕ್ಷಣ ಅಲ್ಲಿದ್ದ ಭದ್ರತಾ ಸಿಬಂದಿ ಅಚ್ಚರಿಗೊಳ್ಳುವಂತಾಯ್ತು. ಆದರೆ ಬೆಂಕಿ ಕಾಣಿಸಿಕೊಳ್ಳುವಷ್ಟರಲ್ಲಿ ಮುಖ್ಯಮಂತ್ರಿ ಅಲ್ಲಿಂದ ಇಳಿದು ವಾಹನದಲ್ಲಿ ಹೋಗಿಯಾಗಿತ್ತು. ಎಸ್ಕಾರ್ಟ್ ವಾಹನವೂ ಹೋದ ನಂತರ ಬೆಂಕಿ ಕಾಣಿಸಿದ್ದು ಸಿಬಂದಿ ಕೂಡಲೇ ನಂದಿಸಿದ್ದಾರೆ.
A minor fire was noticed close to Are Shiroor helipad, near Baindoor in Udupi district, before Karnataka Chief Minister Basavaraj Bommai’s helicopter was to land, on April 13. Fire and Emergency Services personnel put off the fire immediately.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm