ಬ್ರೇಕಿಂಗ್ ನ್ಯೂಸ್
15-04-23 08:38 pm Mangalore Correspondent ಕರಾವಳಿ
ಉಳ್ಳಾಲ, ಎ.15 : ಸೋಮೇಶ್ವರದ ಮುಖ್ಯ ಪಟ್ಟಣ ಕುಂಪಲದ 5,000 ಮಂದಿ ನೀರಿನ ಕೊರತೆಯಿಂದ ಕಂಗೆಟ್ಟಿದ್ದು, ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಶಾಸಕರು ಕುಂಪಲಕ್ಕೆ ಹಲವು ಯೋಜನೆಗಳನ್ನು ಕೈಗೊಂಡರೂ ರಾಜಕೀಯ ದುರುದ್ದೇಶದಿಂದ ಬಿಜೆಪಿಯವರು ಕಾರ್ಯಗತಗೊಳಿಸಲು ಬಿಡದೆ ಇಂದು ಕುಂಪಲದ ಜನ ನೀರಿಗಾಗಿ ಕಷ್ಟಪಡುವಂತಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಂಪಲ ಆರೋಪಿಸಿದ್ದಾರೆ.
ತೊಕ್ಕೊಟ್ಟುವಿನಲ್ಲಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬೇಸಿಗೆ ಕಾಲ ಜೋರಾಗಿದ್ದು, ಸೋಮೇಶ್ವರದ ಮುಖ್ಯ ಪಟ್ಟಣ ಕುಂಪಲದಲ್ಲಿ ನೀರಿನ ಅಭಾವ ಹೆಚ್ಚಾಗಿ ತಲೆದೋರಿದೆ. ಹಿಂದೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಎದುರಾದಾಗ ಜಿಲ್ಲಾಡಳಿತ ಟಾಸ್ಕ್ ಪೋರ್ಸ್ ರಚಿಸಿ ಜನಪ್ರತಿನಿಧಿಗಳನ್ನು ಕಳಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿತ್ತು. ಆದರೆ ಆಡಳಿತ ನಡೆಸುತ್ತಿರುವ ರಾಜ್ಯ ಬಿಜೆಪಿ ಸರಕಾರವು ಚುನಾವಣೆಯ ಹಿಂದೆ ಬಿದ್ದಿದೆ. ಸೋಮೇಶ್ವರ ಗ್ರಾ.ಪಂ ಪುರಸಭೆಯಾಗಿ ಮೇಲ್ದರ್ಜೆಗೆ ಏರಿ ಮೂರು ವರ್ಷಗಳಾದರೂ ಆಡಳಿತಕ್ಕೆ ಚುರುಕು ಮುಟ್ಟಿಸುವಲ್ಲಿ ಬಿಜೆಪಿ ಸರಕಾರ ವಿಫಲವಾಗಿದೆ. ಚುನಾಯಿತ ಪ್ರತಿನಿಧಿಗಳೇ ಇಲ್ಲದೆ ಜನರ ಸಮಸ್ಯೆಗಳನ್ನು ಆಲಿಸುವವರಿಲ್ಲವಾಗಿದೆ.

ಕುಂಪಲದ ಎಲ್ಲಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬೆರಳೆಣಿಕೆಯಷ್ಟೇ ಟ್ಯಾಂಕರ್ ಗಳು ಬರುತ್ತಿದೆ. ವಿದ್ಯಾನಗರದಲ್ಲಿ ಕಲುಷಿತ ನೀರು ಕುಡಿಯಬೇಕಾದ ಪರಿಸ್ಥಿತಿ ಒದಗಿಬಂದಿದೆ. ಮಡ್ಯಾರ್ ನಲ್ಲಿ ಅನಧಿಕೃತ ಜಲ್ಲಿ ಕ್ರಷರ್ ಇರುವ ಪ್ರದೇಶದಲ್ಲಿ ಇಡೀ ಗ್ರಾಮಕ್ಕೆ ಪೂರೈಸಲು ಸಾಧ್ಯವಾಗುವ ನೀರಿನ ಬಾವಿಯಿದೆ. ಸಂಸ್ಥೆಗಳಿಗೆ ಅಲ್ಲಿಂದ ನೀರು ನೀಡಲಾಗುತ್ತಿದೆ. ಈ ಕುರಿತು ಜಾಗದ ಮಾಲೀಕ ಶಾಂತರಾಮ ಶೆಟ್ಟಿ ಅವರಿಗೆ ಶಾಸಕ ಖಾದರ್ ಅವರು ಮನವಿ ಮಾಡಿದಾಗ ಗ್ರಾಮಕ್ಕೆ ನೀರು ಕೊಡಲು ಒಪ್ಪಿಗೆಯನ್ನು ಸೂಚಿಸಿದ್ದರು. ನಂತರ ಬಿಜೆಪಿಯವರು ಅಲ್ಲಿಯೂ ರಾಜಕೀಯ ಮಾಡಿ ಗ್ರಾಮಕ್ಕೆ ನೀರು ಕೊಡದಂತೆ ಮಾಡಿದ್ದಾರೆ.
ಕುಂಪಲಕ್ಕೆ ಬಸ್ ಅವ್ಯವಸ್ಥೆ
ಕುಂಪಲಕ್ಕೆ ಒಂದು ಕೆಎಸ್ ಆರ್ ಟಿಸಿ ಬಸ್, ಖಾಸಗಿ ಸೇರಿ ಒಟ್ಟು ಆರು ಬಸ್ಸುಗಳು ಕಾರ್ಯಾಚರಿಸುತ್ತಿದೆ. ಖಾಸಗಿ ಬಸ್ಸು ಚಾಲಕರ ಉದ್ಧಟತನದಿಂದ ಒಟ್ಟಿಗೆ ಬರುವುದು, ಒಟ್ಟಿಗೆ ಹೋಗುವುದು ಜನರಿಗೆ ಉಪಯೋಗಕ್ಕಿಲ್ಲದಂತಾಗಿದೆ. ಸಮಯ ಪರಿಪಾಲನೆ ಸರಿಯಾಗಿಲ್ಲ. ಶಾಸಕರು ಸಾರಿಗೆ ಸಚಿವರಲ್ಲಿ ಸರಕಾರಿ ಬಸ್ಸಿಗೆ ಒತ್ತಾಯಿಸಿದಾಗ ಎರಡು ಕೆಎಸ್ ಆರ್ ಟಿಸಿ ಬಸ್ಸುಗಳನ್ನು ಪೂರೈಸಲಾಗಿತ್ತು. ಖಾಸಗಿ ಬಸ್ ಮಾಲೀಕರು ಹೈಕೋರ್ಟಿನಿಂದ ತಡೆಯಾಜ್ಞೆಯನ್ನು ತಂದಿರುವುದರಿಂದ ಸದ್ಯ ಒಂದೇ ಸರಕಾರಿ ಬಸ್ಸು ಬರುವಂತಾಗಿದೆ. ಭಾನುವಾರ ದಿನ ಬಸ್ಸುಗಳನ್ನು ನಿಲ್ಲಿಸುವ ಕುರಿತು ಆರ್ ಟಿ ಓ ಅವರಿಗೆ ದೂರು ನೀಡಲಾಗಿದೆ. ಇದರಿಂದ ಬಡ ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ಶಾಸಕ ಯು.ಟಿ ಖಾದರ್ ಸಾಧನೆಗಳನ್ನು ದೂರುವ ನೈತಿಕತೆಯೇ ಇಲ್ಲ. ಹರೇಕಳ- ಅಡ್ಯಾರ್ ಡ್ಯಾಮ್ ಅನ್ನು ಮೋದಿಯವರ ಜಲಜೀವನ್ ಯೋಜನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು.
Mangalore Kumpala task force by district administration amid no water, people boycott elections.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm