ಬ್ರೇಕಿಂಗ್ ನ್ಯೂಸ್
15-04-23 10:19 pm Mangalore Correspondent ಕರಾವಳಿ
ಉಳ್ಳಾಲ, ಎ.15 : ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಜನತೆ ಚಿರತೆಯೊಂದನ್ನ ಕಂಡಿದ್ದು ಈ ಕುರಿತು ಅರಣ್ಯ ಇಲಾಖೆಗೆ ನೀಡಿದ ಮಾಹಿತಿ ಮೇರೆಗೆ ಚಿರತೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯಾಧಿಕಾರಿ ಮಾತ್ರ ಅದು ಬೇರೆ ತಳಿಯ ಬೆಕ್ಕಾಗಿರಬಹುದೆಂದು ಕಾರ್ಯಾಚರಣೆ ಮೊದಲೇ ಸಬೂಬು ನೀಡಿದ್ದಾರೆ.
ಪಜೀರು ಗ್ರಾಮದ ಅಂಗಡಿಕೆರೆ, ಗುಂಪಕಲ್ಲು, ಉಜ್ಜೊಟ್ಟು, ಮಲಾರ್ ಪರಿಸರದಲ್ಲಿ ಎ.13 ರಂದು ಸಂಜೆ ಹೊತ್ತಿಗೆ ಚಿರತೆ ಮರಿಗಳನ್ನು ಕಂಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ದೂರಿಕೊಂಡಿದ್ದರು. ಚಿರತೆ ಗುಮ್ಮದಿಂದ ಸ್ಥಳೀಯರು, ಮಕ್ಕಳು, ದೊಡ್ಡವರು ಪ್ರದೇಶದಲ್ಲಿ ಆತಂಕದಿಂದಲೇ ಸುತ್ತಾಡುತ್ತಿದ್ದಾರೆ. ಚಿರತೆ ಆಗಿದ್ದಲ್ಲಿ ಯಾವ ಸಮಯದಲ್ಲಿ ಬೇಕಾದರೂ ದಾಳಿ ಮಾಡಬಹುದು. ಈ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ರಕ್ಷಣೆ ಒದಗಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ ಒಂದು ಬೋನನ್ನು ಇಟ್ಟಿದ್ದಾರೆ .

ಬೇರೆ ತಳಿಯ ಬೆಕ್ಕೂ ಆಗಿರಬಹುದು!
ಕಾರ್ಯಾಚರಣೆ ಮೊದಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ವಿವಿಧ ತಳಿಯ ಬೆಕ್ಕುಗಳು ಚಿರತೆಯಂತೆ ಕಂಡುಬರುತ್ತವೆ. ಪಜೀರು ಭಾಗದಲ್ಲಿ ಈವರೆಗೆ ಚಿರತೆಗಳು ಬಂದಿರುವ ದಾಖಲೆಗಳು ಇಲ್ಲ. ಸ್ಥಳದಲ್ಲಿ ಹೆಜ್ಜೆ ಗುರುತುಗಳು ಚಿರತೆಯಂತೆ
ಗೋಚರಿಸುತ್ತದೆ, ಆದರೆ ಸ್ಪಷ್ಟವಾಗಿ ಗೋಚರಿಸುತ್ತಿಲ್ಲ. ಮುಂಜಾಗ್ರತಾ ಕ್ರಮವಾಗಿ ಬೋನನ್ನು ಇಟ್ಟಿದ್ದೇವೆ. ಸ್ಥಳದಲ್ಲಿ ನಾಯಿಯನ್ನೂ ಕಟ್ಟಲಾಗಿದೆ ಎಂದಿದ್ದಾರೆ.

ಮಹಾಬಲ ಅವರು ಈ ಮೊದಲು ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಚಿರತೆ ಇರುವಿಕೆಯ ಬಗ್ಗೆ ಸ್ಥಳೀಯರು ದೂರಿ ಕೊಂಡಿದ್ದಾಗ ಇದೇ ರೀತಿಯ ಬೆಕ್ಕಿನ ಕಥೆಯನ್ನೇ ಹೇಳಿದ್ದರು. ಪಜೀರು ಪರಿಸರದಲ್ಲಿ ಸಾಕು ನಾಯಿಗಳು ಕಾಣೆಯಾಗಿದ್ದು ಚಿರತೆಯೇ ಒಯ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.ಇದೀಗ ಗ್ರಾಮಸ್ಥರ ಬೇಡಿಕೆ ಪರಿಗಣಿಸಿ ಅಧಿಕಾರಿಗಳು ಬೋನು ಇಟ್ಟಿದ್ದಾರೆ.
Ullal Pajir people panic of seeing leapord, forest officals say it's Marbled cat, keep bone for trap in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am