ಬ್ರೇಕಿಂಗ್ ನ್ಯೂಸ್
17-04-23 04:23 pm Mangaluru Correspondent ಕರಾವಳಿ
ಬೆಳ್ತಂಗಡಿ, ಎ.17: ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಜೆಪಿ ಕಡೆಯಿಂದ ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿಯಿಂದ ಹಾಲಿ ಶಾಸಕ ಹರೀಶ್ ಪೂಂಜ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದು ಭಾರೀ ಸಂಖ್ಯೆಯ ಕಾರ್ಯಕರ್ತರ ನಡುವೆ ಅದ್ಧೂರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ.
ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಅಲ್ಲಿಂದ 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೆ ಹರೀಶ್ ಪೂಂಜಾ ಮೆರವಣಿಗೆ ನಡೆಸಿದರು. ಮೆರವಣಿಗೆ ಉದ್ದಕ್ಕೂ ಹರೀಶ್ ಪೂಂಜಾ ಪರ ಜೈಕಾರ ಮೊಳಗಿತ್ತು. ಕೇಸರಿ ಶಾಲು ಹಾಕಿದ ಮಹಿಳೆಯರು, ಯುವಕರ ರಣಘೋಷದ ಝೇಂಕಾರ, ಕೇಸರಿ ಬಾವುಟ ಮೆರವಣಿಗೆಯ ಆಕರ್ಷಣೆ ಹೆಚ್ಚಿಸಿತ್ತು. ಬೆಳ್ತಂಗಡಿ ವಿಧಾನಸೌಧ ಕಚೇರಿಯಲ್ಲಿ ಬಿಗು ಬಂದೋಬಸ್ತ್ ನಡುವೆ ಹರೀಶ್ ಪೂಂಜ ನಾಮಪತ್ರ ಸಲ್ಲಿಸಿದರು. ಅತಿ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದು ದೇವರ ಆಶೀರ್ವಾದ. ಜನರು ಅವಕಾಶ ಕೊಟ್ಟಿದ್ದಾರೆ. ಇದನ್ನು ಸದ್ಬಳಕೆ ಮಾಡಿದ್ದೇನೆ ಎಂದು ಇದೇ ವೇಳೆ ಹರೀಶ್ ಪೂಂಜ ಹೇಳಿದರು. ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರ ನಾಯಕರು ಜೊತೆಗಿದ್ದರು.











ಬಿಜೆಪಿ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ಮಧ್ಯಾಹ್ನ ಹೊತ್ತಿಗೆ ಕಾಂಗ್ರೆಸ್ ಮೆರವಣಿಗೆ ಬೆಳ್ತಂಗಡಿಗೆ ಬಂತು. ಸಂತೆಕಟ್ಟೆಯಿಂದ ಎರಡು ಕಿಮೀ ಉದ್ದಕ್ಕೆ ನಡೆದುಕೊಂಡೇ ಬಂದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಪ್ರತಿಯಾಗಿ ರೋಡ್ ಶೋ ನಡೆಸಿದರು. ಎಂಟು ಸಾವಿರದಷ್ಟಿದ್ದ ಕಾರ್ಯಕರ್ತರು ಕಾಂಗ್ರೆಸ್ ಬಾವುಟ ಹಾರಿಸಿಕೊಂಡು ನುಗ್ಗಿ ಬಂದರು. ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಮಾಜಿ ಸಚಿವ ವಸಂತ ಬಂಗೇರ, ಐವಾನ್ ಡಿಸೋಜ, ರಕ್ಷಿತ್ ಭಾವ ಚಿತ್ರನಟ ವಿಜಯ ರಾಘವೇಂದ್ರ, ನಿಕೇತ್ ರಾಜ್ ಮೌರ್ಯ, ಹರೀಶ್ ಕುಮಾರ್ ಮತ್ತಿತರರು ಇದ್ದರು. ಕೆಲವರ ಪ್ರಕಾರ, ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪರವಾಗಿ ಇದೇ ಮೊದಲಿಗೆ ಇಷ್ಟೊಂದು ಸಂಖ್ಯೆಯಲ್ಲಿ ಜನ ಸೇರಿದ್ದಾರಂತೆ. ಹಿಂದೆ ವಸಂತ ಬಂಗೇರ ಗೆಲ್ಲುತ್ತಿದ್ದರೂ, ಕಾರ್ಯಕರ್ತರ ಸಂಖ್ಯೆ ಸಾಮಾನ್ಯ ಇತ್ತು. ಈ ಬಾರಿ ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಪರ ಮೊಳಗಿದ ಹವಾ ಎದುರಿಸಲು ಕಾಂಗ್ರೆಸ್ ಕೂಡ ಸಾಕಷ್ಟು ತಯಾರಿ ನಡೆಸಿರುವುದು ಕಂಡುಬಂದಿದೆ.
ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಾಮಿನೇಶನ್ ಭರಾಟೆ ನಡುವೆಯೇ ಸಂತೆಕಟ್ಟೆಯಲ್ಲಿ ಕಾರ್ಯಕರ್ತರು ಹೊಯ್ ಕೈ ನಡೆಸಿದರು. ವಾಹನಗಳಿಗೆ ಕಲ್ಲು ತೂರಿ ಪರಸ್ಪರ ಸಂಘರ್ಷಕ್ಕಿಳಿದು ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
Belthangady BJP Supporters of Harish Poonja join in thousnads over nomination.Thousands of people gathered to witness the submission of nomination papers of BJP candidate Harish Poonja, the sitting MLA. Belthangady Congress Supporters of rakshith shivaram also join hands in nomination.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm