ಬ್ರೇಕಿಂಗ್ ನ್ಯೂಸ್
17-04-23 10:27 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಸೋಮವಾರ ಉದ್ಘಾಟನೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಪದ್ಮನಾಭ್ ಅಮೀನ್ ಮತ್ತು ಸದಾಶಿವ ಅಮೀನ್ ಅವರು ದೀಪ ಬೆಳಗಿಸುವ ಮೂಲಕ ಚುನಾವಣಾ ಕಚೇರಿ ವಿಧ್ಯುಕ್ತವಾಗಿ ಉದ್ಘಾಟನೆ ಮಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್. ಮಸೂದ್ ಮಾತನಾಡಿ, ಜೆ.ಆರ್.ಲೋಬೊ ಅವರನ್ನು ಶಾಸಕರನ್ನಾಗಿ ಮಾಡಲು ಪಕ್ಷದ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಅವರ ಗೆಲುವಿಗೆ ಅವಿರತವಾಗಿ ಶ್ರಮಿಸಬೇಕು ಎಂದರು.




ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ಮಾತನಾಡಿ, ಸಂವಿಧಾನ ಉಳಿಸಿ ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಈ ಚುನಾವಣೆ ಅತ್ಯಂತ ಮಹತ್ವದ್ದು. ಕ್ಷೇತ್ರದ ಅಭಿವೃದ್ಧಿಗೆ ಜನರು ಚುನಾವಣೆಯಲ್ಲಿ ಆದ್ಯತೆ ನೀಡಬೇಕು. ನಗರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಸಮಾಜದಲ್ಲಿ ಶಾಂತಿ ಸೌಹಾರ್ದ ಕಾಪಾಡಲು ಹಾಗೂ ಅಭಿವೃದ್ಧಿಗೆ ಜನರು ಬದಲಾವಣೆ ತಂದು ರಾಜ್ಯದಲ್ಲಿ ಉತ್ತಮ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.




ಧರ್ಮಗುರುಗಳಾದ ರಿಯಾಝ್ ಫೈಝಿ ಮತ್ತು ಫಾದರ್ ರೋನ್ಸನ್ ಪಿಂಟೊ, ಪುರೋಹಿತ ವಿಶ್ವನಾಥ ಭಟ್ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ರಾಜಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ದಕ್ಷಿಣ ಕನ್ನಡ ಕಾಂಗ್ರೆಸ್ ಪಕ್ಷದ ಚುನಾವಣಾ ಸಂಯೋಜಕಿ ಶಿಭಾ ರಾಮಚಂದ್ರನ್, ಲೋಬೊ ಅವರ ಪತ್ನಿ ಫಿಲೋಮಿನಾ ಲೋಬೊ, ಕಾಂಗ್ರೆಸ್ ಹಿರಿಯ ಧುರೀಣ ಸುರೇಶ್ ಬಲ್ಲಾಳ್, ಶಶಿಧರ್ ಹೆಗ್ಡೆ, ವಿಶ್ವಾಸ್ ದಾಸ್, ನವೀನ್ ಡಿಸೋಜ, ಸಬಿತಾ ಮಿಸ್ಕಿತ್, ಪ್ರಕಾಶ್ ಸಾಲಿಯಾನ್, ಟಿ.ಕೆ ಸುಧೀರ್, ಎಂಜಿ ಹೆಗ್ಡೆ ಇದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಮೊಹಮ್ಮದ್ ಮಸೂದ್, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಕಳ್ಳಿಗೆ ತಾರಾನಾಥ್ ಶೆಟ್ಟಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಥಿ, ಶಾಂತಲಾ ಗಟ್ಟಿ, ಚಂದ್ರಕಲಾ, ಅಬ್ದುಲ್ ರವೂಫ್ ಸೇರಿದಂತೆ ಪಾಲಿಕೆ ಸದಸ್ಯರು ಇದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಪ್ರಾಸ್ತಾವಿಕ ಮಾತನಾಡಿದರು.
The election office of Mangaluru South Congress candidate J R Lobo was inaugurated on Monday, April 17 on Kadri-Nanthoor Road. Party workers Padmanabh Amin and Sadhashiv Amin formally inaugurated by lighting the lamp along with other dignitaries.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm