ಬ್ರೇಕಿಂಗ್ ನ್ಯೂಸ್
17-04-23 10:34 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಭಾರೀ ಜನಸಾಗರದೊಂದಿಗೆ ಮೆರವಣಿಗೆಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು. ಕುದ್ರೋಳಿ ದೇವಸ್ಥಾನದಲ್ಲಿ ಪೂಜೆಗೈದು ಬಳಿಕ ಅದ್ದೂರಿ ಮೆರವಣಿಗೆ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಇದೇ ವೇಳೆ ಮಾತನಾಡಿದ ವೇದವ್ಯಾಸ ಕಾಮತ್, ಕುದ್ರೋಳಿ ದೇವಸ್ಥಾನದಲ್ಲಿ ಪ್ರತಿ ಬಾರಿ ದೇವರಿಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುವ ಸಂಪ್ರದಾಯ ಪಾಲಿಸಿದ್ದೇನೆ. ಅದೇ ರೀತಿಯಲ್ಲಿ ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೇನೆ. ನಾಮಪತ್ರ ಸಲ್ಲಿಸುವಾಗ ಸೇರಿದ ಜನಸ್ತೋಮ ನೋಡುವಾಗ ಇದು ಗೆಲುವಿನ ನಂತರದ ವಿಜಯಯಾತ್ರೆಯಂತೆ ಕಾಣುತ್ತಿದೆ ಎಂದು ಹೇಳಿದರು.
ಪುಷ್ಪಗಳಿಂದ ಸಿಂಗರಿಸಿದ ಜೀಪಿನಲ್ಲಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಕುದ್ರೋಳಿಯಿಂದ ಲಾಲ್ ಭಾಗ್ ತನಕ ಮೆರವಣಿಗೆ ಒಯ್ಯಲಾಯಿತು. ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣದಲ್ಲಿ ವೇದವ್ಯಾಸ ಕಾಮತ್ ಮಾಡಿರುವ ಅಭಿವೃದ್ಧಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅವರ ಗೆಲುವು ಇಲ್ಲಿಂದಲೇ ಮುಂದುವರೆಯಲಿದೆ ಎಂದರು.
ಪಾದಯಾತ್ರೆಯಲ್ಲಿ ಚೆಂಡೆ ವಾದನ, ಕಲ್ಲಡ್ಕ ಬೊಂಬೆಗಳು, ಹಾಡುಗಳು ಕಾರ್ಯಕರ್ತರ ಖುಷಿಯನ್ನು ಹೆಚ್ಚಿಸಿದವು. ವೇದವ್ಯಾಸ ಕಾಮತ್ ಅವರನ್ನು ಮೆಚ್ಚಿ ರಚಿಸಲಾದ ವಿಶೇಷ ಹಾಡಿಗೆ ಕಾರ್ಯಕರ್ತರು ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ವಕೀಲ ರವೀಂದ್ರ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪ್ರಮುಖರಾದ ಉಮಾನಾಥ ಅಮೀನ್, ಸಿಎ ಗೌತಮ್ ಪೈ ಉಪಸ್ಥಿತರಿದ್ದರು.
Sitting Mangaluru South MLA Vedavyas Kamath filed his nomination papers ahead of the state Assembly election here at the Mangaluru City Corporation office on Monday April 17.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm