ಬ್ರೇಕಿಂಗ್ ನ್ಯೂಸ್
18-04-23 06:34 pm Mangaluru Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಡಾ.ಭರತ್ ಶೆಟ್ಟಿ ಕಾವೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಬೆಳಗ್ಗೆ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಗೈದು ಅಲ್ಲಿಂದ ಕಾವೂರಿನ ವರೆಗೆ ಕಾರ್ಯಕರ್ತರ ಮೆರವಣಿಗೆ ನಡೆಯಿತು. ನೂರಾರು ಕಾರ್ಯಕರ್ತರು ಮೆರವಣಿಗೆ ನಡೆಸಿದರೆ, ಶಾಸಕ ಭರತ್ ಶೆಟ್ಟಿ ಮತ್ತು ಸ್ಥಳೀಯ ಬಿಜೆಪಿ ನಾಯಕರು ವಾಹನದಲ್ಲಿ ರೋಡ್ ಶೋ ನಡೆಸಿದರು.
ಬಳಿಕ ಕಾವೂರಿನಲ್ಲಿ ಸಾರ್ವಜನಿಕ ಸಭೆ ನಡೆಸಿದ್ದು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಶೆಟ್ಟಿ ಮತ್ತು ಪುರಂದರದಾಸ್ ಕುಳೂರು ಬಿಜೆಪಿ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಅಭಿವೃದ್ಧಿ ಮತ್ತು ಹಿಂದುತ್ವವನ್ನು ನಾವು ಜೊತೆ ಜೊತೆಯಾಗಿಯೇ ಕೊಂಡೊಯ್ದಿದ್ದೇವೆ. ಈ ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದು, ಧರ್ಮದ ರಕ್ಷಣೆಯನ್ನು ಮಾಡುವುದು ಕೋಮುವಾದ ಎನ್ನಿಸಿದರೆ, ನಾವು ಕೋಮುವಾದಿಗಳೆಂದು ಕರೆಸಿಕೊಳ್ಳಲು ರೆಡಿ ಇದ್ದೇವೆ. ಆದರೆ ನಮ್ಮ ಕ್ಷೇತ್ರದಲ್ಲಿ ಯಾವುದೇ ಮತ ಮಾರಾಟಕ್ಕಿಲ್ಲ ಎಂಬುದನ್ನು ನಾವು ಸಾರಿ ಹೇಳುತ್ತೇವೆ. ಕಳೆದ ಬಾರಿ 26 ಸಾವಿರ ಮತಗಳಿಂದ ಗೆದ್ದಿದ್ದರೆ, ಈ ಬಾರಿ 50 ಸಾವಿರ ಮತಗಳಿಂದ ಗೆಲ್ಲುವುದು ನಮ್ಮ ಗುರಿ ಎಂದರು.







ಶಾಸಕ ಭರತ್ ಶೆಟ್ಟಿ ಮಾತನಾಡಿ, ಐದು ವರ್ಷಗಳ ಕಾಲ ಮನೆಯ ಮಗನಾಗಿ ಬೆಳೆಸಿದ್ದೀರಿ. ನೀವು ಹೇಳಿದ ಕೆಲಸವನ್ನು ನಾನು ಮಾಡಿದ್ದೇನೆ. ಬಹಳಷ್ಟು ಅಭಿವೃದ್ಧಿ ಕಾರ್ಯ ಮಾಡಲು ಬಾಕಿಯಿದೆ, ಅದನ್ನು ಪೂರೈಸಲು ನಮಗೆ ಮತ್ತೊಂದು ಅವಕಾಶ ಕೊಡುತ್ತೀರೆಂದು ನಂಬಿದ್ದೇನೆ ಎಂದರು. ಕಾವೂರಿನಲ್ಲಿ ತಮ್ಮ ವಾಹನದಲ್ಲಿ ಬಂದ ಭರತ್ ಶೆಟ್ಟಿ ಮಂಗಳೂರಿನ ತಾಲೂಕು ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ, ಮೊಗವೀರ ಮುಖಂಡ ರಾಮಚಂದ್ರ ಬೈಕಂಪಾಡಿ ಸೇರಿದಂತೆ ಹಲವಾರು ಮುಖಂಡರು ಜೊತೆಗಿದ್ದರು.
Sitting BJP Mangaluru North MLA Dr Bharath Y Shetty filed his nomination papers for the upcoming legislative assembly elections here at Mangaluru taluk office on Tuesday April 18. Before filing the nomination, Dr Shetty offered pooja rituals and took blessings at Kavoor temple in the presence of party representatives and supporters.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 04:22 pm
HK News Staffer
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm
ಉಳ್ಳಾಲದ ಹರೇಕಳದಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ...
02-07-26 10:09 pm
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm