ಬ್ರೇಕಿಂಗ್ ನ್ಯೂಸ್
20-04-23 10:43 pm Mangalore Correspondent ಕರಾವಳಿ
ಪುತ್ತೂರು, ಎ.20: ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರವಾಗಿ ಕಾರ್ಯಕರ್ತರೇ ಇಲ್ಲ ಎನ್ನುವ ಸ್ಥಿತಿ ಎದುರಾಗಿದೆ. ಹೀಗಾಗಿ ಇಂದು ನಾಮಪತ್ರ ಸಲ್ಲಿಕೆ ದಿನ ಮರ್ಯಾದೆ ಹೋಗಬಾರದು ಎಂದು ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯ ಬೇರೆ ಬೇರೆ ಕಡೆಗಳಿಂದ ಬಸ್ ಮಾಡಿ ಕಾರ್ಯಕರ್ತರನ್ನು ತರಿಸಿಕೊಳ್ಳುವ ಪ್ರಮೇಯ ಎದುರಾಗಿತ್ತು. ಅಲ್ಲದೆ, ಸ್ಟಾರ್ ಪ್ರಚಾರಕರಾದ ಚಿತ್ರನಟಿ ಶೃತಿ ಮತ್ತು ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದರು.
ಇದಕ್ಕೆ ಪ್ರತಿಯಾಗಿ ಪುತ್ತೂರಿನ ಬಿಜೆಪಿ ಕಾರ್ಯಕರ್ತರು ಹಳೆಯ ತುಳು ಹಾಡಿನ ತುಣುಕೊಂದನ್ನು ಪುತ್ತೂರು ಬಿಜೆಪಿ ಅಂತ ಹೇಳಿ ಅಣಕಿಸುವ ರೀತಿ ಹರಿಯಬಿಟ್ಟಿದ್ದಾರೆ. ಮದಿಮೆ ಒಂಜಿ ಆಂಡ್ ಗೆತ್ತಾ (ಮದುವೆಯೊಂದು ಆಯ್ತಲ್ಲಾ) ಎನ್ನುವ ತುಳು ಹಾಡಿನಲ್ಲಿ ಮದುವೆಗೆ ಬಂದವರನ್ನೆಲ್ಲ ಹೇಳಿ ಹಾಡುವ ರೀತಿಯಿದೆ. ಬೇಲೂರಿಂದ ನೂರು ಜನ, ಕಾರ್ಕಳದಿಂದ ಸಾವಿರ ಜನ, ಮಲ್ಪೆಯಿಂದ 200 ಜನ, ಕುಡ್ಲದಿಂದ ಸಾರ ಜನ ಹೀಗೆ ಹಾಡು ಸಾಗುತ್ತದೆ.





ಪುತ್ತೂರು ಬಿಜೆಪಿಯಲ್ಲಿ ಕಾರ್ಯಕರ್ತರೆಲ್ಲ ಬಂಡಾಯ ಅಭ್ಯರ್ಥಿ ಅರುಣ್ ಪುತ್ತಿಲ ಪರವಾಗಿ ನಿಂತಿದ್ದರಿಂದ ಅಧಿಕೃತ ಅಭ್ಯರ್ಥಿ ಪರವಾಗಿ ಕಾರ್ಯಕರ್ತರೇ ಇಲ್ಲದಂತಹ ಸನ್ನಿವೇಶ ಎದುರಾಗಿದೆ. ಇಂಥ ಸ್ಥಿತಿಯನ್ನು ಚೆನ್ನಾಗಿ ಅಣಕಿಸುವ ರೀತಿ ಈ ಹಾಡನ್ನು ಬಳಸಿಕೊಳ್ಳಲಾಗಿದ್ದು, ಇವತ್ತಿನ ಪ್ರಚಾರ ಯಾತ್ರೆಗೆ ಜಿಲ್ಲೆಯ ಬೇರೆ ಬೇರೆ ಕಡೆಯಿಂದ ಜನರು ಬಂದು ಮರ್ಯಾದೆ ಉಳಿಸಿಕೊಂಡಿದ್ದಾರೆ ಎಂಬುದನ್ನು ಸಾರಿ ಹೇಳುತ್ತಿದೆ. ಮಾಹಿತಿ ಪ್ರಕಾರ, ಮಂಗಳೂರು, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಮೂಡುಬಿದ್ರೆಯಿಂದ ಬಸ್ ಮಾಡಿ ಜನರನ್ನು ಪುತ್ತೂರಿಗೆ ಒಯ್ಯಲಾಗಿತ್ತು. ಇದರ ನಡುವೆ, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಇಂದಿನ ಸಮಾವೇಶದಲ್ಲಿ ಬರೆದು ಕೊಟ್ಟ ಭಾಷಣವನ್ನು ಓದುವಾಗಲೇ ಎಡವಿದ್ದು, ತೊದಲಿದ್ದರ ವಿಡಿಯೋ ಕೂಡ ವೈರಲ್ ಆಗಿದೆ.


ಇಡೀ ಜಿಲ್ಲೆಯಲ್ಲೇ ಅತಿ ಹೆಚ್ಚು ಪ್ರಭಾವ ಇರುವ ಸಂಘ ಪರಿವಾರದ ಶಕ್ತಿಕೇಂದ್ರ ಪುತ್ತೂರಿನಲ್ಲೇ ಈ ಪರಿ ನಾಯಕರ ವಿರುದ್ಧ ಬಂಡಾಯ ಎದ್ದಿರುವುದು ಇದೇ ಮೊದಲಾಗಿದ್ದು, ಬ್ರಾಹ್ಮಣರು, ಬಂಟರು, ಕುಲಾಲರು, ಗೌಡರು ಆದಿಯಾಗಿ ಪರಿವಾರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಬಹುತೇಕರು ಅರುಣ್ ಪುತ್ತಿಲ ಪರ ನಿಂತಿದ್ದಾರೆ. ಅರುಣ್ ಪುತ್ತಿಲ ನಾಮಪತ್ರ ಹಿಂತೆಗೆಯದೆ, ಬಿಜೆಪಿ ನಾಯಕರ ವಿರುದ್ಧ ತೊಡೆ ತಟ್ಟಿ ನಿಂತಿದ್ದೇ ಆದರೆ, ಈಗಾಗಲೇ ಪರಿವಾರ ಸಂಘಟನೆಯಲ್ಲಿ ಸೈಡ್ ಲೈನ್ ಆಗಿರುವ ಸತ್ಯಜಿತ್ ಸುರತ್ಕಲ್, ಫ್ರಾಂಕ್ಲಿನ್ ಮೊಂತೇರೊ ಸೇರಿದಂತೆ ಹಿಂದು ನಾಯಕರೆಲ್ಲ ಪುತ್ತೂರಿನಲ್ಲಿ ಪ್ರಚಾರಕ್ಕೆ ಸೇರಿಕೊಳ್ಳಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸರ್ವಾಧಿಕಾರಿ ಧೋರಣೆ ವಿರುದ್ಧ ತೊಡೆ ತಟ್ಟಲಿದ್ದಾರೆ.
Puttur Asha Thimmappa Gowda files nomination, Mp Tejasvi Surya Actress Shruthi join hands in huge rally. As Arun Puthila has divided puttur kesari votes, Asha had to call for BJP members from otber various parts of Dakshina Kannada.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm