ಬ್ರೇಕಿಂಗ್ ನ್ಯೂಸ್
 
            
                        24-04-23 10:26 pm Mangalore Correspondent ಕರಾವಳಿ
 
            ಉಳ್ಳಾಲ, ಎ.24 : ಒಮ್ಮೆ ಹಿಂಪಡೆದ ನಾಮಪತ್ರವನ್ನು ಮರು ಊರ್ಜಿತಗೊಳಿಸಲು ಉಳ್ಳಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮನವಿ ಸಲ್ಲಿಸಿದ್ದು, ನಾಮಪತ್ರ ಹಿಂಪಡೆಯಲು ಕೈ ಕಾರ್ಯಕರ್ತರೇ ಕಾರಣವೆಂದು ಸಬೂಬು ನೀಡಿದರೂ ಚುನಾವಣಾ ಅಧಿಕಾರಿ ಮನವಿಯನ್ನ ತಿರಸ್ಕೃತಗೊಳಿಸಿದ್ದಾರೆ.
ಮಂಗಳೂರು ವಿಧಾನಸಭಾ (ಉಳ್ಳಾಲ) ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಜೆಡಿಎಸ್ ಅಭ್ಯರ್ಥಿಯಾಗಿ ಎ.20ರಂದು ನಾಮಪತ್ರ ಸಲ್ಲಿಸಿದ್ದು ಮರುದಿನ ನಾಮಪತ್ರ ಕ್ರಮಬದ್ಧವಾಗಿ ಹಿಂಪಡೆದಿದ್ದರು. ಇದೀಗ ತನಗೆ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರಿಂದ ಒತ್ತಡ ಹಾಗೂ ಬೆದರಿಕೆ ಇದ್ದುದರಿಂದ ನಾಮಪತ್ರ ಹಿಂಪಡೆದಿರುವುದಾಗಿಯೂ ಹಿಂಪಡೆದ ನಾಮಪತ್ರ ಮರು ಊರ್ಜಿತಗೊಳಿಸಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಕೋರಿದ್ದಾರೆ. ಆದರೆ ಕ್ರಮಬದ್ಧವಾಗಿ ನಾಮಪತ್ರ ಹಿಂಪಡೆದ ಕಾರಣ ಸ್ಪರ್ಧಿಸಲು ಕಾನೂನು ಪ್ರಕಾರ ಅವಕಾಶ ಇಲ್ಲ ಎಂದು ಚುನಾವಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಟಕವಾಡಿದರೇ ಅಲ್ತಾಫ್ ಕುಂಪಲ?
ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಲ್ತಾಫ್ ಕುಂಪಲ ಅವರು ಕನಿಷ್ಠ ನಾಲ್ಕು ಸಾವಿರ ಮತಗಳನ್ನಾದರೂ ಪಡೆಯುವ ಸಾಧ್ಯತೆ ಇತ್ತು. ಆಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ಮುಂದೆ ನಮ್ಮ ಸಾಧನೆಯೂ ಕಡಿಮೆ ಇಲ್ಲ ಎಂದು ರಾಜ್ಯದ ಮುಖಂಡರಿಗೆ ತೋರಿಸಲು ಹೊರಟಿದ್ದ ಪಕ್ಷದ ಮುಖಂಡರಿಗೆ ಅಲ್ತಾಫ್ ದಿಢೀರ್ ನಾಮಪತ್ರ ಹಿಂಪಡೆದಿದ್ದು ಸಂಶಯಕ್ಕೆ ಎಡೆಮಾಡಿತ್ತು. ಉಳ್ಳಾಲದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅಲ್ತಾಫ್ ಅವರನ್ನು ಕಿಡ್ನಾಪ್ ಮಾಡಿದ್ದರು ಎಂಬ ಗುಲ್ಲೆಬ್ಬೆಸಲಾಗಿತ್ತು. ಅಷ್ಟಕ್ಕೂ ಬಿಜೆಪಿ, ಕಾಂಗ್ರೆಸ್ ಮುಖಂಡರು ಆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.
ಒಂದರ್ಥದಲ್ಲಿ ಉಳ್ಳಾಲದಿಂದ ಜೆಡಿಎಸ್ ನಿಂದ ನಝೀರ್ ಉಳ್ಳಾಲ್, ಮಾಜಿ ಶಾಸಕ ಜಯರಾಮ ಶೆಟ್ಟಿ ಅವರು ಪಕ್ಷದ ಗೆಲುವಿಗಾಗಿ ಸ್ಪರ್ಧಿಸಿದ್ದರೇ ಹೊರತು ಇತರ ಕೆಲವು ಕಾರ್ಯಕರ್ತರು ಚುನಾವಣೆ ಸಂದರ್ಭ ನಾಮಪತ್ರ ಸಲ್ಲಿಸಿ ಅನಾರೋಗ್ಯ ಕಾರಣ ನೀಡಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗುವುದು, ಇತರ ಪಕ್ಷದ ಮುಖಂಡರ ಜೊತೆ ಟೈ ಅಪ್ ಮಾಡಿ ತನ್ನ ವೈಯಕ್ತಿಕ ಸಾಲ ತೀರಿಸಿಕೊಳ್ಳುವುದು, ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಇದ್ದಾಗಲೂ ಸ್ಪರ್ಧಿಸುವಂತೆ ನಾಟಕವಾಡಿ ಹಣ ಬಾಚಿಕೊಂಡಿದ್ದು ವರಿಷ್ಠರಿಗೆ ಇರಿಸು ಮುರಿಸು ಉಂಟುಮಾಡಿತ್ತು. ಉಳ್ಳಾಲ ನಗರಸಭೆಯ ಜೆಡಿಎಸ್ ಪ್ರತಿನಿಧಿಗಳು ಅಲ್ತಾಫ್ ನಡೆಗೆ ಕೆಂಡಾಮಂಡಲವಾಗಿದ್ದಾರೆ. 
ಕಾನೂನಿನಡಿ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಿಂದ  ಅರ್ಜಿ ತಿರಸ್ಕೃತಗೊಂಡದಕ್ಕಿಂತ ಬೆದರಿಕೆ ಇದ್ದರೆ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತಲ್ಲವೇ? ನಗುತ್ತಲೇ ತೆರಳಿ ನಾಮಪತ್ರ ಹಿಂಪಡೆದ ಅಲ್ತಾಫ್ ಮುಖಂಡರಿಂದ ಉಗಿಸಿಕೊಳ್ಳೋದು ಬೇಡ ಎಂದು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆರೋಪ ಮಾಡುತ್ತಿದ್ದು ಅಲ್ತಾಫ್ ನನ್ನು ನಂಬಿ ಕೆಟ್ಟೆವು ಎಂಬ ಕೊರಗು ನಾಯಕರಲ್ಲಿ ಹೆಚ್ಚಿಸಿದೆ.
 
            
            
            Mangalore Ullal JDS candidate Altaf Kumpala requests reconsideration of nomination back. Altaf Kumpala, a candidate from the Janata Dal Secular (JDS) party for the Mangalore Assembly Constituency, has claimed that he was abducted by a team of MLA Khader
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm