ಬ್ರೇಕಿಂಗ್ ನ್ಯೂಸ್
24-04-23 10:26 pm Mangalore Correspondent ಕರಾವಳಿ
ಉಳ್ಳಾಲ, ಎ.24 : ಒಮ್ಮೆ ಹಿಂಪಡೆದ ನಾಮಪತ್ರವನ್ನು ಮರು ಊರ್ಜಿತಗೊಳಿಸಲು ಉಳ್ಳಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮನವಿ ಸಲ್ಲಿಸಿದ್ದು, ನಾಮಪತ್ರ ಹಿಂಪಡೆಯಲು ಕೈ ಕಾರ್ಯಕರ್ತರೇ ಕಾರಣವೆಂದು ಸಬೂಬು ನೀಡಿದರೂ ಚುನಾವಣಾ ಅಧಿಕಾರಿ ಮನವಿಯನ್ನ ತಿರಸ್ಕೃತಗೊಳಿಸಿದ್ದಾರೆ.
ಮಂಗಳೂರು ವಿಧಾನಸಭಾ (ಉಳ್ಳಾಲ) ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಜೆಡಿಎಸ್ ಅಭ್ಯರ್ಥಿಯಾಗಿ ಎ.20ರಂದು ನಾಮಪತ್ರ ಸಲ್ಲಿಸಿದ್ದು ಮರುದಿನ ನಾಮಪತ್ರ ಕ್ರಮಬದ್ಧವಾಗಿ ಹಿಂಪಡೆದಿದ್ದರು. ಇದೀಗ ತನಗೆ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರಿಂದ ಒತ್ತಡ ಹಾಗೂ ಬೆದರಿಕೆ ಇದ್ದುದರಿಂದ ನಾಮಪತ್ರ ಹಿಂಪಡೆದಿರುವುದಾಗಿಯೂ ಹಿಂಪಡೆದ ನಾಮಪತ್ರ ಮರು ಊರ್ಜಿತಗೊಳಿಸಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಕೋರಿದ್ದಾರೆ. ಆದರೆ ಕ್ರಮಬದ್ಧವಾಗಿ ನಾಮಪತ್ರ ಹಿಂಪಡೆದ ಕಾರಣ ಸ್ಪರ್ಧಿಸಲು ಕಾನೂನು ಪ್ರಕಾರ ಅವಕಾಶ ಇಲ್ಲ ಎಂದು ಚುನಾವಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಟಕವಾಡಿದರೇ ಅಲ್ತಾಫ್ ಕುಂಪಲ?
ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಲ್ತಾಫ್ ಕುಂಪಲ ಅವರು ಕನಿಷ್ಠ ನಾಲ್ಕು ಸಾವಿರ ಮತಗಳನ್ನಾದರೂ ಪಡೆಯುವ ಸಾಧ್ಯತೆ ಇತ್ತು. ಆಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ಮುಂದೆ ನಮ್ಮ ಸಾಧನೆಯೂ ಕಡಿಮೆ ಇಲ್ಲ ಎಂದು ರಾಜ್ಯದ ಮುಖಂಡರಿಗೆ ತೋರಿಸಲು ಹೊರಟಿದ್ದ ಪಕ್ಷದ ಮುಖಂಡರಿಗೆ ಅಲ್ತಾಫ್ ದಿಢೀರ್ ನಾಮಪತ್ರ ಹಿಂಪಡೆದಿದ್ದು ಸಂಶಯಕ್ಕೆ ಎಡೆಮಾಡಿತ್ತು. ಉಳ್ಳಾಲದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅಲ್ತಾಫ್ ಅವರನ್ನು ಕಿಡ್ನಾಪ್ ಮಾಡಿದ್ದರು ಎಂಬ ಗುಲ್ಲೆಬ್ಬೆಸಲಾಗಿತ್ತು. ಅಷ್ಟಕ್ಕೂ ಬಿಜೆಪಿ, ಕಾಂಗ್ರೆಸ್ ಮುಖಂಡರು ಆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.
ಒಂದರ್ಥದಲ್ಲಿ ಉಳ್ಳಾಲದಿಂದ ಜೆಡಿಎಸ್ ನಿಂದ ನಝೀರ್ ಉಳ್ಳಾಲ್, ಮಾಜಿ ಶಾಸಕ ಜಯರಾಮ ಶೆಟ್ಟಿ ಅವರು ಪಕ್ಷದ ಗೆಲುವಿಗಾಗಿ ಸ್ಪರ್ಧಿಸಿದ್ದರೇ ಹೊರತು ಇತರ ಕೆಲವು ಕಾರ್ಯಕರ್ತರು ಚುನಾವಣೆ ಸಂದರ್ಭ ನಾಮಪತ್ರ ಸಲ್ಲಿಸಿ ಅನಾರೋಗ್ಯ ಕಾರಣ ನೀಡಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗುವುದು, ಇತರ ಪಕ್ಷದ ಮುಖಂಡರ ಜೊತೆ ಟೈ ಅಪ್ ಮಾಡಿ ತನ್ನ ವೈಯಕ್ತಿಕ ಸಾಲ ತೀರಿಸಿಕೊಳ್ಳುವುದು, ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಇದ್ದಾಗಲೂ ಸ್ಪರ್ಧಿಸುವಂತೆ ನಾಟಕವಾಡಿ ಹಣ ಬಾಚಿಕೊಂಡಿದ್ದು ವರಿಷ್ಠರಿಗೆ ಇರಿಸು ಮುರಿಸು ಉಂಟುಮಾಡಿತ್ತು. ಉಳ್ಳಾಲ ನಗರಸಭೆಯ ಜೆಡಿಎಸ್ ಪ್ರತಿನಿಧಿಗಳು ಅಲ್ತಾಫ್ ನಡೆಗೆ ಕೆಂಡಾಮಂಡಲವಾಗಿದ್ದಾರೆ.
ಕಾನೂನಿನಡಿ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಿಂದ ಅರ್ಜಿ ತಿರಸ್ಕೃತಗೊಂಡದಕ್ಕಿಂತ ಬೆದರಿಕೆ ಇದ್ದರೆ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತಲ್ಲವೇ? ನಗುತ್ತಲೇ ತೆರಳಿ ನಾಮಪತ್ರ ಹಿಂಪಡೆದ ಅಲ್ತಾಫ್ ಮುಖಂಡರಿಂದ ಉಗಿಸಿಕೊಳ್ಳೋದು ಬೇಡ ಎಂದು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆರೋಪ ಮಾಡುತ್ತಿದ್ದು ಅಲ್ತಾಫ್ ನನ್ನು ನಂಬಿ ಕೆಟ್ಟೆವು ಎಂಬ ಕೊರಗು ನಾಯಕರಲ್ಲಿ ಹೆಚ್ಚಿಸಿದೆ.
Mangalore Ullal JDS candidate Altaf Kumpala requests reconsideration of nomination back. Altaf Kumpala, a candidate from the Janata Dal Secular (JDS) party for the Mangalore Assembly Constituency, has claimed that he was abducted by a team of MLA Khader
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 06:59 pm
HK News Staffer
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm
ಉಳ್ಳಾಲದ ಹರೇಕಳದಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ...
02-07-26 10:09 pm