ಬ್ರೇಕಿಂಗ್ ನ್ಯೂಸ್
27-04-23 03:48 pm Mangalore Correspondent ಕರಾವಳಿ
ಪುತ್ತೂರು, ಎ.27: ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಪರವಾಗಿ ಭಾರೀ ಬೆಂಬಲ ವ್ಯಕ್ತವಾಗುತ್ತಿರುವ ನಡುವಲ್ಲೇ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಪುತ್ತಿಲ ವಿರುದ್ಧ ಹರಿಹಾಯ್ದಿದ್ದಾರೆ. ಅರುಣ್ ಪುತ್ತಿಲ ಯಾವ ರೀತಿಯ ಹಿಂದುತ್ವ ಹೋರಾಟ ಮಾಡಿದ್ದಾರೆ ಎಂದು ಕಲ್ಲಡ್ಕ ಭಟ್ ಪ್ರಶ್ನೆ ಮಾಡಿದ್ದಾರೆ.
ಇಡೀ ಜಗತ್ತೇ ಬಿಜೆಪಿಯನ್ನು ಹಿಂದುತ್ವದ ಪಾರ್ಟಿ ಎಂದು ಒಪ್ಪಿಕೊಂಡಿರುವಾಗ ಪುತ್ತೂರಿನಲ್ಲಿ ಯಾರೋ ಒಬ್ಬ ನನ್ನದೇ ನೈಜ ಹಿಂದುತ್ವ ಎಂದು ಹೇಳುತ್ತಿದ್ದಾನೆ. ಎಲ್ಲಿ ಹಿಂದುತ್ವದ ಹೋರಾಟ ಮಾಡಿದ್ದಾನೆ. ಯಾರೋ ಗೋಸಾಗಾಟ ಮಾಡಿದಾಗ ಜೊತೆಗೆ ನಿಂತಿದ್ದರೆ ಅದು ಹಿಂದುತ್ವವಾ.. ಅವನು ಹಿಂದುಗಳ ವಿರುದ್ಧವೇ ಹೋರಾಟ ಮಾಡಿರೋದು. ನೀವು ಬೇಕಿದ್ದರೆ ಅವನ ಅಫಿಡವಿಟನ್ನು ನೋಡಿ. ಅದರಲ್ಲೇ ಬರೆದುಕೊಂಡಿದ್ದಾನೆ. ಏನೆಲ್ಲ ಕೇಸುಗಳಿವೆ ಅಂತ. ಹಿಂದುಗಳಿಗೆ ಹೊಡೆದವರು, ದೇವಸ್ಥಾನದ ಹಣ ಹೊಡೆದವರು, ಯಾವುದೋ ರವೀಂದ್ರ ಪೂಜಾರಿ ಎಂಬವರ ಜಾಗ ಕೊಡಿಸಬೇಕೆಂದು ಗಲಾಟೆ ಮಾಡಿಸಿ 307 ಸೆಕ್ಷನ್ ಹಾಕಿಸಿಕೊಂಡವರು. ಇದೆಲ್ಲ ಎಂಥ ಹಿಂದುತ್ವರೀ.. ಪಾಪ, ಅನೇಕ ಮಕ್ಕಳಿಗೆ ಅದೆಲ್ಲ ಗೊತ್ತಿಲ್ಲ. ಭಾರತೀಯ ಜನತಾ ಪಾರ್ಟಿಗಿಂತ ದೊಡ್ಡ ಹಿಂದುತ್ವ ಸಂಘಟನೆ ಇಲ್ಲ. ಇಡೀ ಜಗತ್ತಿನಲ್ಲಿ ಎರಡನೇ ದೊಡ್ಡ ವ್ಯಕ್ತಿಯಾಗಿರುವ, ಕೇಂದ್ರ ಗೃಹ ಸಚಿವ ಅಮಿತ್ ಷಾ ತಾನೇ ಅವರಲ್ಲಿ ಮಾತಾಡುತ್ತೇನೆ ಎಂದಾಗ, ಅದನ್ನು ಧಿಕ್ಕರಿಸಿ ನಡೆದವರು ಅರುಣ್ ಪುತ್ತಿಲ.

ಒಂದು ಪಕ್ಷ ಇಲ್ಲದೆ, ಒಬ್ಬನಿಂದ ಯಾವ ರೀತಿಯ ಹಿಂದುತ್ವ ಆಗಬಹುದು. ಏನಾದರೂ ಅಭಿವೃದ್ಧಿ ಮಾಡಲು ಸಾಧ್ಯವೇ.. ಸ್ವತಂತ್ರವಾಗಿ ನಿಂತವರು ಅಭಿವೃದ್ಧಿ ಮಾಡೋಕೆ ಸಾಧ್ಯನಾ.. ಅವನಿಗೆ ಹೇಳೋರಿಲ್ಲ, ಕೇಳೋರಿಲ್ಲ. ಸ್ವತಂತ್ರ ಅಂದರೆ ಹಾಗೇ ತಾನೇ.. ಬಿಜೆಪಿ ಅನ್ನೋದು ಅಖಿಲ ಭಾರತ ಸಂಘಟನೆ. ಪುತ್ತೂರಿಗೆ ಮಾತ್ರ ಸೀಮಿತ ಅಲ್ಲ. ಹಾಗಾಗಿ ಬಿಜೆಪಿಯನ್ನು ಎಲ್ಲರೂ ಬೆಂಬಲಿಸಬೇಕು, ಆಮೂಲಕ ಹಿಂದುತ್ವ, ದೇಶ ಉಳಿಸಬೇಕು. ಜನ ಹಾಗೇ ಮಾಡ್ತಾರೆ ಅಂದ್ಕೊಂಡಿದ್ದೇನೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಗೃಹ ಪ್ರವೇಶಕ್ಕೆ ಬಂದಿದ್ದ ಪ್ರಭಾಕರ ಭಟ್, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
Mangalore Kalladka Prabhakar Bhat slams Puttur Arun Puthila, questions him about Hindutva. Is stopping transport of cows is Hindutva he questioned. Entire word has accepted that BJP is a party for Hindus then how cab Arun say what he follows is only the real Hindutva he added.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm