ಬ್ರೇಕಿಂಗ್ ನ್ಯೂಸ್
28-04-23 03:48 pm Mangalore Correspondent ಕರಾವಳಿ
ಪುತ್ತೂರು, ಎ.28 : ಸಂಘಟನೆಗಿಂತ ತಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದೆ. ಇದೇ ನೆಪದಲ್ಲಿ ಸಂಘಟನೆ ಬಿಟ್ಟು ಹೋದವರಿದ್ದಾರೆ. ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಒಬ್ಬರು ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣ ಕಾರ್ಯವನ್ನು ಸಂಘ ನಿರಂತರ ಮಾಡಿಕೊಂಡು ಬರುತ್ತಿದೆ. ದೇಶದ ಪ್ರಧಾನಿ ಆಗಿರುವ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಘದ ಕೊಡುಗೆ. ಅವರ್ಯಾರೂ ತಾವು ಪ್ರಧಾನಿ ಆಗುತ್ತೇವೆ, ರಾಷ್ಟ್ರಪತಿ ಆಗುತ್ತೇವೆಂದು ಅಂದ್ಕೊಂಡವರಲ್ಲ. ಇದರ ನಡುವೆ, ಸಂಘದ ಚೌಕಟ್ಟನ್ನು ಮೀರಿ ಹೊರ ನಡೆದ ಹಲವಾರು ಮಂದಿ ನಾಯಕರು ದೇಶದಲ್ಲಿದ್ದಾರೆ.
ಕಲ್ಯಾಣ್ ಸಿಂಗ್ , ಪ್ರವೀಣ್ ತೊಗಾಡಿಯಾ ದೊಡ್ಡ ಮಟ್ಟದ ನಾಯಕರಾಗಿದ್ದರು. ಆದರೆ ತಾವು ನಡೆದಿದ್ದೇ ಸರಿಯೆಂದು ಸಂಘದ ಚೌಕಟ್ಟನ್ನು ಬಿಟ್ಟು ಹೊರ ನಡೆದರು. ಇದೆಲ್ಲ ನಡೆದಿದ್ದರೂ, ಸಂಘ ತನ್ನ ಚೌಕಟ್ಟಿಗೆ ಬದ್ಧವಾಗಿಯೇ ನಿಂತಿದೆ ಎಂದರು. ಬಿಜೆಪಿ ಅಭ್ಯರ್ಥಿ ವಿರುದ್ಧ ಪಕ್ಷೇತರವಾಗಿ ನಿಂತಿರುವ ಅರುಣ್ ಕುಮಾರ್ ಪುತ್ತಿಲ ತಾನು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದೇನೆ ಅಂತಾರೆ. ಆದರೆ ಬಿಜೆಪಿ ಅಭ್ಯರ್ಥಿ ಆಯ್ಕೆಯನ್ನು ಮಾಡಿರುವುದೇ ನರೇಂದ್ರ ಮೋದಿ ನೇತೃತ್ವದ ತಂಡ ಅನ್ನೋದು ಅವರಿಗೆ ತಿಳಿದಿಲ್ಲವೇ.. ಸಂಘದ ಚೌಕಟ್ಟು ಹೊರಗೆ ನಿಂತು ಮೋದಿಗೆ ಬೆಂಬಲ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.
ಸದ್ಯದ ಮಟ್ಟಿಗೆ ದೇಶದಲ್ಲಿ ಹಿಂದೂಗಳ ಪರವಾಗಿರುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ಅದಕ್ಕಾಗಿ ಬಿಜೆಪಿಗೇ ಮತ ಕೊಡಬೇಕು ಎನ್ನುವುದು ನಮ್ಮ ನಿಲುವು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ತಡೆ ಕಾಯ್ದೆ ವಾಪಸು ಪಡೆಯುವುದಾಗಿ ಹೇಳಿದ್ದಾರೆ. ಈ ಕಾರಣಕ್ಕಾಗಿ ಹಿಂದುಗಳೆಲ್ಲಾ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮುರಳಿಕೃಷ್ಣ ಮನವಿ ಮಾಡಿದರು.
Bajarang dal leader Puttur Muralikrishan slams those calling themsleves as big Hindu Leaders. Congress should never come to power he added.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm