ಬ್ರೇಕಿಂಗ್ ನ್ಯೂಸ್
28-04-23 03:48 pm Mangalore Correspondent ಕರಾವಳಿ
ಪುತ್ತೂರು, ಎ.28 : ಸಂಘಟನೆಗಿಂತ ತಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದೆ. ಇದೇ ನೆಪದಲ್ಲಿ ಸಂಘಟನೆ ಬಿಟ್ಟು ಹೋದವರಿದ್ದಾರೆ. ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಒಬ್ಬರು ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣ ಕಾರ್ಯವನ್ನು ಸಂಘ ನಿರಂತರ ಮಾಡಿಕೊಂಡು ಬರುತ್ತಿದೆ. ದೇಶದ ಪ್ರಧಾನಿ ಆಗಿರುವ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಘದ ಕೊಡುಗೆ. ಅವರ್ಯಾರೂ ತಾವು ಪ್ರಧಾನಿ ಆಗುತ್ತೇವೆ, ರಾಷ್ಟ್ರಪತಿ ಆಗುತ್ತೇವೆಂದು ಅಂದ್ಕೊಂಡವರಲ್ಲ. ಇದರ ನಡುವೆ, ಸಂಘದ ಚೌಕಟ್ಟನ್ನು ಮೀರಿ ಹೊರ ನಡೆದ ಹಲವಾರು ಮಂದಿ ನಾಯಕರು ದೇಶದಲ್ಲಿದ್ದಾರೆ.
ಕಲ್ಯಾಣ್ ಸಿಂಗ್ , ಪ್ರವೀಣ್ ತೊಗಾಡಿಯಾ ದೊಡ್ಡ ಮಟ್ಟದ ನಾಯಕರಾಗಿದ್ದರು. ಆದರೆ ತಾವು ನಡೆದಿದ್ದೇ ಸರಿಯೆಂದು ಸಂಘದ ಚೌಕಟ್ಟನ್ನು ಬಿಟ್ಟು ಹೊರ ನಡೆದರು. ಇದೆಲ್ಲ ನಡೆದಿದ್ದರೂ, ಸಂಘ ತನ್ನ ಚೌಕಟ್ಟಿಗೆ ಬದ್ಧವಾಗಿಯೇ ನಿಂತಿದೆ ಎಂದರು. ಬಿಜೆಪಿ ಅಭ್ಯರ್ಥಿ ವಿರುದ್ಧ ಪಕ್ಷೇತರವಾಗಿ ನಿಂತಿರುವ ಅರುಣ್ ಕುಮಾರ್ ಪುತ್ತಿಲ ತಾನು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದೇನೆ ಅಂತಾರೆ. ಆದರೆ ಬಿಜೆಪಿ ಅಭ್ಯರ್ಥಿ ಆಯ್ಕೆಯನ್ನು ಮಾಡಿರುವುದೇ ನರೇಂದ್ರ ಮೋದಿ ನೇತೃತ್ವದ ತಂಡ ಅನ್ನೋದು ಅವರಿಗೆ ತಿಳಿದಿಲ್ಲವೇ.. ಸಂಘದ ಚೌಕಟ್ಟು ಹೊರಗೆ ನಿಂತು ಮೋದಿಗೆ ಬೆಂಬಲ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.
ಸದ್ಯದ ಮಟ್ಟಿಗೆ ದೇಶದಲ್ಲಿ ಹಿಂದೂಗಳ ಪರವಾಗಿರುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ಅದಕ್ಕಾಗಿ ಬಿಜೆಪಿಗೇ ಮತ ಕೊಡಬೇಕು ಎನ್ನುವುದು ನಮ್ಮ ನಿಲುವು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ತಡೆ ಕಾಯ್ದೆ ವಾಪಸು ಪಡೆಯುವುದಾಗಿ ಹೇಳಿದ್ದಾರೆ. ಈ ಕಾರಣಕ್ಕಾಗಿ ಹಿಂದುಗಳೆಲ್ಲಾ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮುರಳಿಕೃಷ್ಣ ಮನವಿ ಮಾಡಿದರು.
Bajarang dal leader Puttur Muralikrishan slams those calling themsleves as big Hindu Leaders. Congress should never come to power he added.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm