ಬ್ರೇಕಿಂಗ್ ನ್ಯೂಸ್
29-04-23 02:58 pm Mangaluru Correspondent ಕರಾವಳಿ
ಪುತ್ತೂರು, ಎ.29: ಪುತ್ತೂರಿನಲ್ಲಿ ಅಭ್ಯರ್ಥಿ ಆಯ್ಕೆಯನ್ನು ಯಾರೋ ಇಬ್ಬರು ಕುಳಿತು ಮಾಡಿದ್ದಲ್ಲ. ಪಕ್ಷದ ಶಕ್ತಿಕೇಂದ್ರದಿಂದ ಹಿಡಿದು ಚುನಾವಣಾ ಸಮಿತಿ, ಸಂಸದೀಯ ವರೆಗೂ ವಿಶ್ಲೇಷಣೆ ಮಾಡುತ್ತದೆ. ಕೊನೆಯದಾಗಿ ಪ್ರಧಾನಿ ಮೋದಿಯೇ ಅಭ್ಯರ್ಥಿ ಆಯ್ಕೆ ಮಾಡೋದು. ಕಾಂಗ್ರೆಸಿನ ಹಾಗೆ ಒಂದಿಬ್ಬರು ಕುಳಿತು ಮಾಡುವ ಪ್ರಕ್ರಿಯೆ ಅಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷ 1960 ರ ಕಾಲದ ಹಳೆ ಟೇಪ್ ರೆಕಾರ್ಡಿಂಗ್ ಇದ್ದಹಾಗೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಈ ಕಾನೂನು ವಾಪಾಸು ಪಡೀತೆನೆ, ಆ ಕಾನೂನು ಮಾಡಲು ಬಿಡೋದಿಲ್ಲ ಎನ್ನುತ್ತಿದೆ. ಇದೇ ಕಾರಣಕ್ಕೆ ಗೃಹಮಂತ್ರಿ ಅಮಿತ್ ಶಾ ಕಾಂಗ್ರೆಸ್ ಪಕ್ಷವನ್ನು ರಿವರ್ಸ್ ಗೇರ್ ಗೆ ಹೋಲಿಸಿದ್ದು, ಕಾಂಗ್ರೆಸ್ ರಿವರ್ಸ್ ಗೇರ್ ಹಾಕಿ ಓಡುತ್ತಿದೆ.
ಆದರೆ ಬಿಜೆಪಿ ಡಬಲ್ ಇಂಜಿನ್ ಮೂಲಕ ಮುಂದಕ್ಕೆ ಓಡುತ್ತಿದೆ. ಇದೇ ಕಾಂಗ್ರೆಸ್ ಮತ್ತು ಬಿಜೆಪಿಗೆ ಇರುವ ವ್ಯತ್ಯಾಸ. ರಾಜ್ಯಕ್ಕೆ ಪ್ರಿಯಾಂಕ ಗಾಂಧಿಯವರನ್ನು ಕರೆಸಿ ದೋಸೆ ಮಾಡಿಸಿದ ಮಾತ್ರಕ್ಕೆ ಇಲ್ಲಿನ ಜನ ಮತ ಹಾಕಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರ ಗೆಲುವು ನಿಶ್ಚಿತ. ಸಂಘಟನೆಯಲ್ಲಿ ಕೆಲಸ ಮಾಡಿದ ಆಧಾರದಲ್ಲಿ ಆಶಾ ತಿಮ್ಮಪ್ಪ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಜೆಪಿಯಲ್ಲಿ ಕಾಂಗ್ರೆಸ್ ಪಕ್ಷದಂತೆ ಕೇವಲ ಇಬ್ಬರು ಕುಳಿತು ಅಭ್ಯರ್ಥಿಯನ್ನು ಆಯ್ಕೆ ಮಾಡುವ ವ್ಯವಸ್ಥೆಯಿಲ್ಲ.
ತಳಮಟ್ಟದ ಶಕ್ತಿಕೇಂದ್ರ, ಜಿಲ್ಲಾ ಕೇಂದ್ರ, ರಾಜ್ಯ ಚುನಾವಣಾ ಸಮಿತಿ, ಕೇಂದ್ರ ಚುನಾವಣಾ ಸಮಿತಿ, ಪಾರ್ಲಿಮೆಂಟರಿ ಸಮಿತಿ ಚರ್ಚೆ ನಡೆಸಿದ ಬಳಿಕ ಪ್ರಧಾನಿ ಮೋದಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತಗೊಳಿಸುತ್ತಾರೆ ಎಂದರು. ಗೆಲ್ಲುವ ಪಕ್ಷದಲ್ಲಿ ಆಕಾಂಕ್ಷಿಗಳು ಇರೋದು ಸಾಮಾನ್ಯವಾಗಿದ್ದು, ಪುತ್ತೂರಿನಲ್ಲೂ ಈ ಬಾರಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಪಕ್ಷ ಎಲ್ಲರಿಗೂ ಸ್ಥಾನಮಾನವನ್ನು ಕೊಡುತ್ತೆ, ಆದರೆ ಸ್ವಲ್ಪ ಸಮಾಧಾನದಲ್ಲಿ ಕಾಯಬೇಕು ಎಂದ ಅವರು ಯುವಜನತೆಗೆ ಬಿಜೆಪಿ ಖಂಡಿತವಾಗಿಯೂ ಅವಕಾಶ ನೀಡುತ್ತದೆ ಎಂದರು
BJP President of Tamil Nadu K Annamalai in Puttur, Candidate Asha Thimmappa Gowda is selected by PM Modi to contest not like congress that selects its candidates by some state leaders he slammed.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm