ಬ್ರೇಕಿಂಗ್ ನ್ಯೂಸ್
29-04-23 06:02 pm Mangaluru Correspondent ಕರಾವಳಿ
ಪುತ್ತೂರು, ಎ.29: ದೇವದುರ್ಲಭ, ನಿಸ್ವಾರ್ಥ ಕಾರ್ಯಕರ್ತರನ್ನು ಗುಲಾಮನನ್ನಾಗಿ ಪರಿಗಣಿಸಿದರೆ, ಅದಕ್ಕೆ ಈ ಸಮಾಜ ಉತ್ತರ ಕೊಡುತ್ತದೆ ಎನ್ನುವುದನ್ನು ಪುತ್ತೂರಿನಿಂದ ದೆಹಲಿ ವರೆಗೆ ತೋರಿಸಬೇಕಾಗಿದೆ. ಯಾರೆಲ್ಲ ನನ್ನ ಮೇಲಾಗಲೀ, ಕಾರ್ಯಕರ್ತರ ಮೇಲಾಗಲೀ ಆರೋಪ ಮಾಡಿದ್ದಾರೋ ಅವರಿಗೆ ಮಹಾಲಿಂಗೇಶ್ವರನೇ ಉತ್ತರ ಕೊಡುತ್ತಾನೆ ಎಂದು ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಹೇಳಿದ್ದಾರೆ.
ಪುತ್ತೂರಿನಲ್ಲಿ ನಡೆದ ಸೀತಾ ಪರಿವಾರ ಕಾರ್ಯಕ್ರಮದಲ್ಲಿ ಸೇರಿದ ನೂರಾರು ಮಹಿಳಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರ, ದಾರ್ಷ್ಟ್ಯದ ಮೂಲಕ ಕಾರ್ಯಕರ್ತರನ್ನು ಹತ್ತಿಕ್ಕುವ ಸನ್ನಿವೇಶವನ್ನು ನಾವು ಎದುರಿಸುತ್ತಿದ್ದೇವೆ. ಕಾರ್ಯಕರ್ತರು ಅಂದರೆ, ಗುಲಾಮರು ಅನ್ನುವಂತಹ ಸ್ಥಿತಿಯನ್ನು ನೋಡುತ್ತಿದ್ದೇವೆ. ಆದರೆ ನಾವು ಗುಲಾಮರು ಅಲ್ಲ ಅನ್ನುವುದನ್ನು ತೋರಿಸಬೇಕಾಗಿದೆ. ಅಧಿಕಾರಕ್ಕಾಗಿ ನಾವು ಚುನಾವಣೆಗೆ ಇಳಿದಿಲ್ಲ. ಶಾಸಕನಾಗಿ ಮೆರೆಯಬೇಕೆಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಕಾರ್ಯಕರ್ತರ ನೋವು- ನಲಿವುಗಳ ಪರವಾಗಿ ನಿಲ್ಲಬೇಕು, ಅವರ ಪ್ರತೀಕವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಬೇಕು ಎಂಬ ಉದ್ದೇಶದಿಂದ ಚುನಾವಣೆ ಸ್ಪರ್ಧಿಸುತ್ತಿದ್ದೇನೆ.


ಬಾಳಿ ಬದುಕಬೇಕಿದ್ದ ಅಕ್ಷತಾ ಎನ್ನುವ ಹೆಣ್ಣು ಮಗಳ ಕೊಲೆಯಾದ ಸಂದರ್ಭದಲ್ಲಿ ಆಕೆಯ ಕುಟುಂಬಕ್ಕೆ ನ್ಯಾಯ ದೊರಕಿಸಲು ನಮ್ಮಿಂದ ಸಾಧ್ಯವಾಗಿಲ್ಲ. ಸೌಮ್ಯ ಭಟ್ ಕೊಲೆಯಾದಾಗ ನ್ಯಾಯ ದೊರಕಿಸಲು ಈ ಸಮಾಜದಿಂದ ಸಾಧ್ಯವಾಗಿಲ್ಲ. ಸೀತಾ ಮಾತೆಯ ಆದರ್ಶ ಇಟ್ಟುಕೊಂಡ ಮಹಿಳೆಯರು ಮನಸ್ಸು ಮಾಡಿದರೆ, ಸಮಾಜದಲ್ಲಿ ಬದಲಾವಣೆ ತರಬಹುದು. ಸಮಾಜದಲ್ಲಿ ಹೊಸ ಧ್ವನಿ ಎತ್ತಬಹುದಾಗಿದೆ. ಅಧಿಕಾರಕ್ಕಾಗಿ ರಾಜಕಾರಣ ಮಾಡಬಾರದು. ಆದರೆ ಅಧಿಕಾರ ಸಿಕ್ಕ ಸಂದರ್ಭದಲ್ಲಿ ನಾವು ಹಿಂದುತ್ವ ಮರೆಯಬಾರದು ಎಂದರು ಪುತ್ತಿಲ.

ಈಗ ಸಾಮಾಜಿಕ ಜಾಲತಾಣದಲ್ಲಿ ನೂರಕ್ಕೂ ಹೆಚ್ಚು ಫೇಕ್ ಖಾತೆಗಳ ಮೂಲಕ ನಮ್ಮ ಕಾರ್ಯಕರ್ತರ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಸುದ್ದಿಗೋಷ್ಟಿ ಕರೆದು ಅಭ್ಯರ್ಥಿಯ ತೇಜೋವಧೆ ಮಾಡಿ, ಮಾನಸಿಕ ಸ್ಥಿತಿಯನ್ನು ಕುಗ್ಗಿಸುತ್ತಿದ್ದಾರೆ. ಅಧಿಕಾರ ನಮ್ಮಲ್ಲಿ ಇಲ್ಲ. ಹಣದ ವ್ಯವಸ್ಥೆ ನಮ್ಮಲ್ಲಿ ಇಲ್ಲ. ಸನಾತನ ಧರ್ಮ ಪರಂಪರೆ ಪುತ್ತೂರಿನಲ್ಲಿದೆ. ಸೆರಗೊಡ್ಡಿ ಕೇಳುತ್ತೇನೆ. ನಿಮ್ಮ ಒಂದು ಮತದ ಜೊತೆಗೆ ಹತ್ತು ರೂ. ಕೊಟ್ಟು ನನ್ನ ಚುನಾವಣೆಗೆ ಸಹಕರಿಸಿ. ನೀವೆಲ್ಲರೂ ಅಕ್ಕ, ತಂಗಿ, ತಾಯಿಗೆ ಸಮಾನರಿದ್ದೀರಿ. ಯಾರೆಲ್ಲ ನನ್ನ ಮೇಲೆ ಆರೋಪಗಳಿಗೆ ಮಹಾಲಿಂಗೇಶ್ವರನೇ ಉತ್ತರ ಕೊಡುತ್ತಾನೆ. ನೀವು ಕೊಡುವ ಮತ ಹಿಂದುತ್ವಕ್ಕೆ ಕೊಡುವ ಮತವಾಗುತ್ತದೆ. ಮೋದಿಯ ಆಡಳಿತಕ್ಕೆ ಕೊಡುವ ಮತವಾಗಲಿದೆ. ಯಾವುದೇ ಆರೋಪ- ಪ್ರತ್ಯಾರೋಪಗಳಿಗೆ ಹೋಗುವುದಿಲ್ಲ. ಆರೋಪಗಳೇ ನನಗೆ ಆಶೀರ್ವಾದ ಎಂದುಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದರು ಅರುಣ್ ಪುತ್ತಿಲ.
BJP members are trying to make false allegations against me on social media to discourage me, says Puttur, Arun Puthila. Hindu Karyakartas are not slaves of anyone," he added during a women's programme in Puttur in Dakshina Kannada.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm