ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm