ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am