ಬ್ರೇಕಿಂಗ್ ನ್ಯೂಸ್
 
            
                        30-04-23 04:13 pm Mangalore Correspondent ಕರಾವಳಿ
 
            ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
 
            
            
            Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
 
    
            
             30-10-25 11:00 pm
                        
            
                  
                Bangalore Correspondent    
            
                    
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm