ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm