ಬ್ರೇಕಿಂಗ್ ನ್ಯೂಸ್
30-04-23 06:25 pm Mangalore Correspondent ಕರಾವಳಿ
ಸುಳ್ಯ, ಎ.30 : ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ನಾವು ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಜೆ.ಪಿ.ನಡ್ಡಾ, ಪ್ರವೀಣ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪ್ರವೀಣ್ ಪೋಷಕರು ಮತ್ತು ಪತ್ನಿ ನಡ್ಡಾ ಅವರನ್ನು ಹೂಗುಚ್ಛ ನೀಡಿ ಶಾಲು ಹೊದಿಸಿ ಸ್ವಾಗತಿಸಿದರು.
ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಡ್ಡಾ ಅವರು, ಪ್ರವೀಣ್ ಕೊಲೆ ತುಂಬ ದುಃಖದಾಯಕ ಮತ್ತು ಆಗಬಾರದ ಘಟನೆ ನಡೆದು ಹೋಗಿತ್ತು. ಈ ಕೃತ್ಯಕ್ಕೆ ಎಸ್ಡಿಪಿಐ ಮತ್ತು ಪಿಎಫ್ಐ ಕಾರಣವಾಗಿದ್ದು, ಘಟನೆ ನಂತರ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಲಾಯ್ತು. ನಮ್ಮ ಸರ್ಕಾರ ಸಂಘಟನೆಯನ್ನೇ ನಿಷೇಧಿಸಿ ಎನ್ಐಎ ತನಿಖೆ ಮಾಡ್ತಿದೆ. ಆದರೆ ಇಂತಹ ಮಾನಸಿಕತೆ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಪ್ರವೀಣ್ ಕುಟುಂಬಕ್ಕೆ ನ್ಯಾಯ ಸಿಗೋವರೆಗೂ ಹೋರಾಟ ಇರಲಿದೆ. ಕುಟುಂಬ ಸದಸ್ಯರ ಜೊತೆ ನಮ್ಮ ಸರ್ಕಾರ ಇರಲಿದೆ ಎಂದರು.
ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕೈ ಮುಗಿದು ನಮಿಸಿದ ನಡ್ಡಾ ಅವರು, ಮನೆಯ ಒಳಗೆ ತೆರಳಿ ಪ್ರವೀಣ್ ಪೋಷಕರು ಮತ್ತು ಪತ್ನಿ ಜೊತೆ ಮಾತುಕತೆ ನಡೆಸಿದರು. ಕೆಲ ಕಾಲ ಮಾತುಕತೆ ನಡೆಸಿ ಕುಶಲೋಪರಿ ವಿಚಾರಿಸಿದರು. ಇಡೀ ದೇಶ ಮತ್ತು ಪಕ್ಷ ನಿಮ್ಮ ಜೊತೆ ಇದೆ ಎಂದು ಪೋಷಕರಿಗೆ ನಡ್ಡಾ ಭರವಸೆ ನೀಡಿದರು. ಬಳಿಕ ಮನೆಯಲ್ಲಿ ಪಾನೀಯ ಸೇವಿಸಿ ಕುಟುಂಬಸ್ಥರ ಪರಿಚಯ ಮಾಡಿಕೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ನಡ್ಡಾ ಅವರಿಗೆ ಸಾಥ್ ನೀಡಿದರು. ಕೊಲೆಯಾಗುವುದಕ್ಕೂ ಮುನ್ನ ಪ್ರವೀಣ್ ಅವರು ಹೊಸ ಮನೆ ಕಟ್ಟಿಸಲು ಯೋಜನೆ ಹಾಕಿದ್ದರು. ಹಳೆ ಮನೆಯ ಹಿಂಭಾಗದಲ್ಲೇ ಆವರಣ ರೆಡಿ ಮಾಡಿದ್ದರು. ಯಾರೂ ಅಂದ್ಕೊಂಡಿರದ ರೀತಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಪ್ರವೀಣ್ 2022ರ ಜುಲೈ 26ರಂದು ಕೊಲೆಯಾಗಿದ್ದರು. ಆನಂತರ ಕಾರ್ಯಕರ್ತರ ಕಡೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ ಪ್ರವೀಣ್ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ ಮನೆ ಕಟ್ಟಿಸಿಕೊಡುವ ಭರವಸೆ ನೀಡಲಾಗಿತ್ತು. ನಳಿನ್ ಕುಮಾರ್ ನೀಡಿದ ಭರವಸೆಯನ್ನು ಕೇವಲ ಐದು ತಿಂಗಳಲ್ಲಿ ಈಡೇರಿಸಲಾಗಿತ್ತು. ಮೊನ್ನೆ ಎಪ್ರಿಲ್ 27ರಂದು ಹೊಸ ಮನೆಯ ಗೃಹ ಪ್ರವೇಶ ಆಗಿತ್ತು.
President of BJP J P Nadda visits Praveen Nettaru newly built house at Sullia, talks to family member's. Entire nation is with your familly he added. BJP President Nalin Kateel also accompanied him.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm