ಬ್ರೇಕಿಂಗ್ ನ್ಯೂಸ್
27-10-20 06:33 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 27 : ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲಿನಿಂದ ಕಂಟೇನರ್ ಲಾರಿ ಹರಿದು ಬೈಕಿನಲ್ಲಿದ್ದ ದಂಪತಿ ದುರಂತ ಸಾವು ಕಂಡಿದ್ದಾರೆ. ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ರಾಯನ್ ಫೆರ್ನಾಂಡಿಸ್ (35) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಮೃತರು ಎಂದು ತಿಳಿದು ಬಂದಿದೆ. ಪ್ರಿಯಾ ಅವರನ್ನು ರಾಯನ್ ತಮ್ಮ ಕೆಟಿಎಂ ಬೈಕಿನಲ್ಲಿ ಪಿಕ್ ಮಾಡಿ ಮನೆಗೆ ಬರುತ್ತಿದ್ದರು. ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದ ವೇಳೆ ಬಲಭಾಗದಿಂದ ಬಂದ ಕಂಟೇನರ್ ಲಾರಿ ಬೈಕ್ ಮೇಲಿನಿಂದ ಹರಿದುಕೊಂಡು ಹೋಗಿದೆ. ನೋಡ ನೋಡುತ್ತಲೇ ಭೀಕರ ಅಪಘಾತ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಾಯನ್ ಮತ್ತು ಪ್ರಿಯಾ ಮಂಗಳೂರಿನ ಬಜಾಲ್ ನಿವಾಸಿಗಳಾಗಿದ್ದು ವಾರದ ಹಿಂದಷ್ಟೇ ಉಳ್ಳಾಲಕ್ಕೆ ನಿವಾಸ ಬದಲಾಯಿಸಿದ್ದರು. ರಾಯನ್ ಮತ್ತು ಪ್ರಿಯಾ ಇಬ್ಬರೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು.



ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ಟರ್ನ್ ಆಗುವ ಪಾಯಿಂಟ್ ಅಪಘಾತಕ್ಕೆ ಕಾರಣವಾಗುತ್ತಿದ್ದು ಕಳೆದ ಒಂದು ತಿಂಗಳಲ್ಲಿ ಹಲವಾರು ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Lorry rams on bike couple riders dies on spot near Thokuttu, Mangalore Bridge on Tuesday, October 27, 2020. The Deceased have been identified as Rayan and Priya residents of Bajal.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm