ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm