ಬ್ರೇಕಿಂಗ್ ನ್ಯೂಸ್
02-05-23 10:12 pm Udupi/Mangalore Correspondent ಕರಾವಳಿ
ಉಡುಪಿ/ಮಂಗಳೂರು, ಮೇ 2 : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆ ನಿಷೇಧಿಸುವುದಾಗಿ ಹೇಳಿರುವುದನ್ನು ವಿರೋಧಿಸಿ ಬಜರಂಗದಳದ ಕಾರ್ಯಕರ್ತರು ಉಡುಪಿ ಮತ್ತು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಬಜರಂಗದಳ ರಾಜ್ಯ ಸಂಯೋಜಕ ಸುನಿಲ್ ಕೆ.ಆರ್. ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ದರೆ ಬಜರಂಗದಳವನ್ನು ನಿಷೇಧಿಸಿ ತೋರಿಸಬೇಕು. ಆಗ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸುತ್ತೇವೆ. ನಾವು ದೇಶ, ಧರ್ಮದ ರಕ್ಷಣೆಗಾಗಿ ಸಂಘರ್ಷ ಮಾಡಿಕೊಂಡು ಬಂದಿದ್ದೇವೆ. ಸ್ವಾಭಿಮಾನಿ ಕಾರ್ಯಕರ್ತರ ಪಡೆಯನ್ನು ಕೆಣಕಿದರೆ ಸುಮ್ಮನೆ ಕೂರುವುದಿಲ್ಲ. ಕೂಡಲೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಮೇ 10ರಂದು ಸೂಕ್ತ ಉತ್ತರ ಕೊಡಲಾಗುವುದು ಎಂದು ಎಚ್ವರಿಕೆ ನೀಡಿದರು.


ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿದ್ದಾರೆ. ಬಜರಂಗದಳ ಆರಂಭವಾಗಿದ್ದೇ ಸಂಘರ್ಷದಿಂದ ಸಂಘರ್ಷಕ್ಕಾಗಿ. ಸೇವಾ ಸುರಕ್ಷಾ ಸಂಸ್ಕಾರ ಎಂಬ ದ್ಯೇಯ ವಾಕ್ಯ ಇಟ್ಟುಕೊಂಡು ಇಡೀ ದೇಶದಾದ್ಯಂತ ಬಜರಂಗದಳ ಕೆಲಸ ಮಾಡುತ್ತಿದೆ, ಬಜರಂಗ ದಳ ಯಾವತ್ತು ದೇಶ ವಿರೋಧಿ ಕೃತ್ಯ ನಡೆಸಿಲ್ಲ, ಪೊಲೀಸ್ ಠಾಣೆಗೆ ಬೆಂಕಿ ಕೊಟ್ಟಿಲ್ಲ. ಆದರೂ ನಿಷೇಧ ಮಾಡ್ತೇವೆಂದು ಹೇಳಿ ಕಾಂಗ್ರೆಸ್ ಪೋಸು ಕೊಡುತ್ತಾರೆ ಎಂದು ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದರು.
Congress to Ban Bajrang Dal after coming to power, members protest in Mangalore and Udupi. Hours after Congress, in its manifesto, promised to impose a complete ban on the youth wing of the Sangh-affiliated Vishwa Hindu Parishad (VHP)-- Bajrang Dal, BJP and the latter lambasted the latest announcement and called it a deliberate attempt to hamper peace and prosperity of the country.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm