ಬ್ರೇಕಿಂಗ್ ನ್ಯೂಸ್
03-05-23 08:25 pm Mangalore Correspondent ಕರಾವಳಿ
Photo credits : @cutinha_divya
ಮಂಗಳೂರು, ಮೇ 3 : ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ವಿಪರೀತ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಂಗಳೂರು ನಗರಕ್ಕೆ ದಿನ ಬಿಟ್ಟು ದಿನ ಅಂದರೆ ಎರಡು ದಿನಕ್ಕೆ ಒಮ್ಮೆಯಂತೆ ನೀರು ಸರಬರಾಜು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.
ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ 4.34 ಮೀಟರ್ ಎತ್ತರಕ್ಕೆ ನೀರು ಲಭ್ಯವಿದ್ದು ಮಳೆ ಬಾರದೇ ಇದ್ದಲ್ಲಿ ಇದು 20 ದಿನಗಳಿಗೆ ಮಾತ್ರ ಸಾಕಾಗಲಿದೆ. 2019ರಲ್ಲಿ ಇದೇ ಸಮಯಕ್ಕೆ 4.67 ಮೀಟರ್ ನೀರು ಇತ್ತು ಎನ್ನುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ನೀರು ರೇಶನಿಂಗ್ ಮಾಡಲು ಮಹಾನಗರ ಪಾಲಿಕೆಗೆ ಸೂಚನೆ ನೀಡಿದ್ದಾರೆ. ಅದರಂತೆ, ಮೇ 4ರ ನಂತರ ಎರಡು ದಿನಕ್ಕೊಮ್ಮೆ ನೀರು ಬಿಡಲು ನಿರ್ಧಾರಕ್ಕೆ ಬರಲಾಗಿದೆ.


ಮೇ 5ರಂದು ಪಾಲಿಕೆ ವ್ಯಾಪ್ತಿಯ ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ನೀಡಿದರೆ, 6ರಂದು ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ನೀರು ಹರಿಸಲು ನಿರ್ಣಯ ಮಾಡಲಾಗಿದೆ. ಒಂದು ದಿನ ನೀರು ಪೂರೈಕೆ ಕಡಿತವಾಗಲಿದ್ದು ಮಳೆ ಬರುವ ವರೆಗೂ ಇದೇ ಪ್ರಕಾರದಲ್ಲಿ ನೀರು ಪೂರೈಕೆ ಇರಲಿದ್ದು ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. ಇದಲ್ಲದೆ, ಇತರೇ ಕಟ್ಟಡ ನಿರ್ಮಾಣ ಕಾಮಗಾರಿ, ವಾಹನಗಳ ಸರ್ವಿಸಿಂಗ್ ಕೆಲಸಗಳಿಗೆ ನೀರು ಜೋಡಣೆ ಕಡಿತ ಮಾಡಲು ಸೂಚಿಸಲಾಗಿದ್ದು ನೀರಿನ ಪೋಲು ಮಾಡಿದ್ದು ಕಂಡುಬಂದಲ್ಲಿ ಅಂತಹ ಮನೆಗಳ ನೀರಿನ ಜೋಡಣೆಯನ್ನು ಕಡಿತ ಮಾಡಲು ಪಾಲಿಕೆ ಕಮಿಷನರ್ ಆದೇಶದಲ್ಲಿ ತಿಳಿಸಿದ್ದಾರೆ.
ಮಳೆ ಬಂದು ತುಂಬೆ ಅಣೆಕಟ್ಟಿನಲ್ಲಿ ನೀರು ಶೇಖರಗೊಳ್ಳುವ ವರೆಗೂ ಇದೇ ರೀತಿ ನೀರಿನ ರೇಶನಿಂಗ್ ಮುಂದುವರಿಯಲಿದೆ. ಈ ಬಾರಿ ಬೇಸಗೆ ಮಳೆ ಬಾರದೇ ಇರುವುದರಿಂದ ನದಿಯಲ್ಲಿ ನೀರಿನ ಪ್ರಮಾಣ ಕುಸಿತವಾಗಿದೆ. ಇತ್ತೀಚೆಗೆ ಶಂಭೂರಿನ ಎಎಂಆರ್ ಅಣೆಕಟ್ಟಿನಿಂದ ತುಂಬೆಗೆ ನೀರು ಬಿಡಲಾಗಿತ್ತು. ಆದರೆ ಆ ನೀರು ಕೂಡ ತುಂಬೆಯಲ್ಲಿ ಖಾಲಿಯಾಗಿದ್ದು ರೇಶನಿಂಗ್ ಅನಿವಾರ್ಯ ಅನ್ನುವಂತಾಗಿದೆ. ತೀವ್ರ ಬಿಸಿಲಿನಿಂದಾಗಿ ನದಿಯಲ್ಲಿ ನೀರು ಬರಿದಾಗುತ್ತಿದ್ದು ಉಪ್ಪಿನಂಗಡಿ ಭಾಗದಲ್ಲಿ ನೇತ್ರಾವತಿ ಸಂಪೂರ್ಣ ಬತ್ತಿ ಹೋಗಿದೆ. ಈಗ ಅಣೆಕಟ್ಟಿನಲ್ಲಿ ಉಳಿದಿರುವ ನೀರು ಕೂಡ ಖಾಲಿಯಾಗುತ್ತಿದ್ದು ಮಂಗಳೂರಿನ ಜನರು ನೀರಿಗಾಗಿ ಹಾಹಾಕಾರ ಪಡುವ ಸ್ಥಿತಿ ಎದುರಾಗಿದೆ.
Shortage of water in Thumbe vented dam, water supply on alternate days only in Mangalore city. In view of the drastic drop in water storage level at Thumbe vented dam, water rationing will be implemented from tomorrow (May 4) in the city limits.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm