ಬ್ರೇಕಿಂಗ್ ನ್ಯೂಸ್
03-05-23 08:25 pm Mangalore Correspondent ಕರಾವಳಿ
Photo credits : @cutinha_divya
ಮಂಗಳೂರು, ಮೇ 3 : ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ವಿಪರೀತ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಂಗಳೂರು ನಗರಕ್ಕೆ ದಿನ ಬಿಟ್ಟು ದಿನ ಅಂದರೆ ಎರಡು ದಿನಕ್ಕೆ ಒಮ್ಮೆಯಂತೆ ನೀರು ಸರಬರಾಜು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.
ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ 4.34 ಮೀಟರ್ ಎತ್ತರಕ್ಕೆ ನೀರು ಲಭ್ಯವಿದ್ದು ಮಳೆ ಬಾರದೇ ಇದ್ದಲ್ಲಿ ಇದು 20 ದಿನಗಳಿಗೆ ಮಾತ್ರ ಸಾಕಾಗಲಿದೆ. 2019ರಲ್ಲಿ ಇದೇ ಸಮಯಕ್ಕೆ 4.67 ಮೀಟರ್ ನೀರು ಇತ್ತು ಎನ್ನುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ನೀರು ರೇಶನಿಂಗ್ ಮಾಡಲು ಮಹಾನಗರ ಪಾಲಿಕೆಗೆ ಸೂಚನೆ ನೀಡಿದ್ದಾರೆ. ಅದರಂತೆ, ಮೇ 4ರ ನಂತರ ಎರಡು ದಿನಕ್ಕೊಮ್ಮೆ ನೀರು ಬಿಡಲು ನಿರ್ಧಾರಕ್ಕೆ ಬರಲಾಗಿದೆ.
ಮೇ 5ರಂದು ಪಾಲಿಕೆ ವ್ಯಾಪ್ತಿಯ ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ನೀಡಿದರೆ, 6ರಂದು ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ನೀರು ಹರಿಸಲು ನಿರ್ಣಯ ಮಾಡಲಾಗಿದೆ. ಒಂದು ದಿನ ನೀರು ಪೂರೈಕೆ ಕಡಿತವಾಗಲಿದ್ದು ಮಳೆ ಬರುವ ವರೆಗೂ ಇದೇ ಪ್ರಕಾರದಲ್ಲಿ ನೀರು ಪೂರೈಕೆ ಇರಲಿದ್ದು ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. ಇದಲ್ಲದೆ, ಇತರೇ ಕಟ್ಟಡ ನಿರ್ಮಾಣ ಕಾಮಗಾರಿ, ವಾಹನಗಳ ಸರ್ವಿಸಿಂಗ್ ಕೆಲಸಗಳಿಗೆ ನೀರು ಜೋಡಣೆ ಕಡಿತ ಮಾಡಲು ಸೂಚಿಸಲಾಗಿದ್ದು ನೀರಿನ ಪೋಲು ಮಾಡಿದ್ದು ಕಂಡುಬಂದಲ್ಲಿ ಅಂತಹ ಮನೆಗಳ ನೀರಿನ ಜೋಡಣೆಯನ್ನು ಕಡಿತ ಮಾಡಲು ಪಾಲಿಕೆ ಕಮಿಷನರ್ ಆದೇಶದಲ್ಲಿ ತಿಳಿಸಿದ್ದಾರೆ.
ಮಳೆ ಬಂದು ತುಂಬೆ ಅಣೆಕಟ್ಟಿನಲ್ಲಿ ನೀರು ಶೇಖರಗೊಳ್ಳುವ ವರೆಗೂ ಇದೇ ರೀತಿ ನೀರಿನ ರೇಶನಿಂಗ್ ಮುಂದುವರಿಯಲಿದೆ. ಈ ಬಾರಿ ಬೇಸಗೆ ಮಳೆ ಬಾರದೇ ಇರುವುದರಿಂದ ನದಿಯಲ್ಲಿ ನೀರಿನ ಪ್ರಮಾಣ ಕುಸಿತವಾಗಿದೆ. ಇತ್ತೀಚೆಗೆ ಶಂಭೂರಿನ ಎಎಂಆರ್ ಅಣೆಕಟ್ಟಿನಿಂದ ತುಂಬೆಗೆ ನೀರು ಬಿಡಲಾಗಿತ್ತು. ಆದರೆ ಆ ನೀರು ಕೂಡ ತುಂಬೆಯಲ್ಲಿ ಖಾಲಿಯಾಗಿದ್ದು ರೇಶನಿಂಗ್ ಅನಿವಾರ್ಯ ಅನ್ನುವಂತಾಗಿದೆ. ತೀವ್ರ ಬಿಸಿಲಿನಿಂದಾಗಿ ನದಿಯಲ್ಲಿ ನೀರು ಬರಿದಾಗುತ್ತಿದ್ದು ಉಪ್ಪಿನಂಗಡಿ ಭಾಗದಲ್ಲಿ ನೇತ್ರಾವತಿ ಸಂಪೂರ್ಣ ಬತ್ತಿ ಹೋಗಿದೆ. ಈಗ ಅಣೆಕಟ್ಟಿನಲ್ಲಿ ಉಳಿದಿರುವ ನೀರು ಕೂಡ ಖಾಲಿಯಾಗುತ್ತಿದ್ದು ಮಂಗಳೂರಿನ ಜನರು ನೀರಿಗಾಗಿ ಹಾಹಾಕಾರ ಪಡುವ ಸ್ಥಿತಿ ಎದುರಾಗಿದೆ.
Shortage of water in Thumbe vented dam, water supply on alternate days only in Mangalore city. In view of the drastic drop in water storage level at Thumbe vented dam, water rationing will be implemented from tomorrow (May 4) in the city limits.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm