ಬ್ರೇಕಿಂಗ್ ನ್ಯೂಸ್
03-05-23 10:39 pm Udupi Correspondent ಕರಾವಳಿ
ಉಡುಪಿ, ಮೇ 3 : ಕರಾವಳಿಯಲ್ಲಿ ನೀರಿಗಾಗಿ ಹಾಹಾಕಾರ ಎದ್ದಿರುವಾಗಲೇ ಮಣಿಪಾಲ ಎಂಐಟಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧಕರ ತಂಡವೊಂದು ಅಂತರ್ಜಲದ ಬಗ್ಗೆ ಅಧ್ಯಯನ ಕೈಗೊಂಡಿದ್ದು ಭಾರೀ ಪ್ರಮಾಣದ ಭೂಮಿಯೊಳಗಿನ ಅಂತರ್ಜಲ ಒರತೆಯ ರೂಪದಲ್ಲಿ ಕರಾವಳಿ ಭಾಗದಲ್ಲಿ ಸಮುದ್ರ ಸೇರುತ್ತಿದೆ ಎಂದು ಪತ್ತೆ ಮಾಡಿದ್ದಾರೆ.
ಎಂಐಟಿ ಪ್ರಾಧ್ಯಾಪಕರಾದ ಡಾ.ಕೆ.ಬಾಲಕೃಷ್ಣ, ಡಾ.ಎಚ್.ಎನ್.ಉದಯಶಂಕರ್ ಹಾಗೂ ಸಂಶೋಧನಾ ವಿದ್ಯಾರ್ಥಿ ಲಿನೊ ಯೋವನ್ ನೇತೃತ್ವದ ಸಂಶೋಧನಾ ತಂಡ, ಉಡುಪಿ ಜಿಲ್ಲೆಯ ಬೀಜಾಡಿ, ಕಾಪು, ಮಲ್ಪೆ, ಬೈಂದೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ದೊಡ್ಡ ಪ್ರಮಾಣದಲ್ಲಿ ಅಂತರ್ಜಲವು ಒರತೆಯ ರೂಪದಲ್ಲಿ ಅರಬ್ಬಿ ಸಮುದ್ರ ಸೇರುತ್ತಿರುವುದನ್ನು ವರದಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಅಂತರ್ಜಲ ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ಈ ಸಂಶೋಧನೆ ಪ್ರಾಮುಖ್ಯ ಪಡೆದಿದೆ. ಸಮುದ್ರ ತೀರದಲ್ಲಿ ಕಾಣಸಿಗುವ ಈ ಒರತೆಗಳು ತಾಜಾ ಅಂತರ್ಜಲದ ಮೂಲವಾಗಿದ್ದು, ಸಮುದ್ರ ಪಾಲಾಗುತ್ತಿರುವುದನ್ನು ತೋರಿಸಿದೆ. ಸಿಹಿ ನೀರಿನ ಒಂದು ಭಾಗವನ್ನು ಸುಸ್ಥಿರವಾಗಿ ಕುಡಿಯುವ ನೀರಾಗಿ ಬಳಸಲು ಸಾಧ್ಯವಾದಲ್ಲಿ, ನೀರಿನ ಸಮಸ್ಯೆಯನ್ನು ಕೊಂಚ ಮಟ್ಟಿಗೆ ನೀಗಿಸಬಹುದು. ನದಿಗಳು ನೀರನ್ನು ಸಾಗರಕ್ಕೆ ಪ್ರವಹಿಸುವಂತೆ ಭೂಮಿಯ ಅಡಿಯಲ್ಲಿ ಹುದುಗಿರುವ ಅಂತರ್ಜಲವು ಶೇ.10 ರಷ್ಟು ಸಿಹಿ ನೀರನ್ನು ಸಾಗರದೆಡೆಗೆ ಪ್ರವಹಿಸುವುದನ್ನು ಇತರೆಡೆ ನಡೆದ ಸಂಶೋಧನೆಗಳಿಂದ ಕಂಡುಕೊಳ್ಳಲಾಗಿದೆ.
ಆದಾಗ್ಯೂ ದೇಶದ ಉದ್ದಕ್ಕೂ ಇರುವ ಕರಾವಳಿಯಲ್ಲಿ ಬೇರಾವುದೇ ಕಡೆ ಇಂತಹ ಯಾವುದೇ ಸಂಶೋಧನೆಗಳು ನಡೆದಿಲ್ಲ. ಅಥವಾ ಅಂತರ್ಜಲ ಸಮುದ್ರ ಸೇರುವುದು ಪತ್ತೆಯಾಗಿಲ್ಲ. ಇದರ ಪ್ರಾಮುಖ್ಯತೆ ಗುರುತಿಸಿ, ಭಾರತ ಸರಕಾರದ ಭೂವಿಜ್ಞಾನ ಸಚಿವಾಲಯವು ತಿರುವನಂತಪುರದ ರಾಷ್ಟ್ರೀಯ ಭೂವಿಜ್ಞಾನ ಅಧ್ಯಯನ ಕೇಂದ್ರಕ್ಕೆ (ಎನ್ಸಿಇಎಸ್ಎಸ್) ಈ ಜವಾಬ್ದಾರಿಯನ್ನು ವಹಿಸಿದೆ. ಎಂಐಟಿ ಮಣಿಪಾಲವು ಈ ಸಂಸ್ಥೆಯ ಪ್ರಮುಖ ಪಾಲುದಾರರಾಗಿದ್ದು ಉಡುಪಿ- ಉತ್ತರ ಕನ್ನಡ ಕರಾವಳಿಯಲ್ಲಿ ಅಂತರ್ಜಲ ನಿಕ್ಷೇಪಗಳ ಪತ್ತೆ ಕಾರ್ಯದಲ್ಲಿ ತೊಡಗಿದೆ.
ಉಡುಪಿ ಜಿಲ್ಲೆಯ ಕರಾವಳಿ ತೀರದಲ್ಲಿ ಹೊರಸೂಸುತ್ತಿರುವ ಗಮನಾರ್ಹ ಪ್ರಮಾಣದ ಅಂತರ್ಜಲವು ಇಲ್ಲಿ ಬೀಳುತ್ತಿರುವ ಭಾರೀ ಮಳೆ ಹಾಗೂ ಈ ಪ್ರದೇಶದ ಭೂ ಮೇಲ್ಮೈಯಲ್ಲಿ ಹರಡಿರುವ ಸುಮಾರು 40,000 ವರ್ಷ ಹಳೆಯ ಜಲಭರಿತ ಮಡ್ಡಿಯ ನಿಕ್ಷೇಪಗಳಿಂದ ಸಾಧ್ಯವಾಗಿದೆ. ಈ ವಿಶೇಷ ಮಡ್ಡಿಯು ಗಣನೀಯ ಪ್ರಮಾಣದ ಮಳೆನೀರನ್ನು ತನ್ನೊಡಲಲ್ಲಿ ಹುದುಗಿಸಿ, ಸಮುದ್ರದೆಡೆಗೆ ಪ್ರವಹಿಸುವ ಸಾಮರ್ಥ್ಯ ಹೊಂದಿದೆ. ಈ ಪ್ರಮಾಣದ ಅಂತರ್ಜಲ ಹೊರಸೂಸುವಿಕೆಯಿಂದ ಈ ಪ್ರದೇಶಗಳನ್ನು ಸಂಭಾವ್ಯ ಉಪ್ಪು ನೀರು ಒಳನುಗ್ಗುವಿಕೆಯಿಂದ ರಕ್ಷಿಸುತ್ತದೆ ಎಂದು ಸಂಶೋಧನಾ ವರದಿಯ ಲೇಖಕ ಲಿನೊ ಯೋವನ್ ಹೇಳಿದ್ದಾರೆ.
Greater volumes of groundwater into the ocean a concern now in Karavali region. They found that dry, arid regions have very little groundwater discharge, opening the limited groundwater supplies.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm