ಬ್ರೇಕಿಂಗ್ ನ್ಯೂಸ್
06-05-23 02:57 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಮಂಗಳೂರು ಮಹಾನಗರಕ್ಕೆ ನೀರೊದಗಿಸುವ ನೇತ್ರಾವತಿ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. 2019ರಲ್ಲಿ ಇದೇ ರೀತಿಯ ಸ್ಥಿತಿ ಎದುರಾಗಿತ್ತು. ಮೂರು ವರ್ಷಗಳ ಬಳಿಕ ಮಂಗಳೂರಿನಲ್ಲಿ ಮತ್ತೆ ಅದೇ ರೀತಿಯ ಸ್ಥಿತಿ ಉಂಟಾಗಿದೆ.
2019ರಲ್ಲಿ ಎಪ್ರಿಲ್ 11ರಿಂದ ಮೊದಲನೇ ಹಂತದ ನೀರಿನ ರೇಷನಿಂಗ್ ಆರಂಭಗೊಂಡಿತ್ತು. ಆದರೆ, ಆಗ ತುಂಬೆ ಡ್ಯಾಮ್ ನಲ್ಲಿ 5.5 ಮೀ.ನಷ್ಟು ನೀರಿನ ಮಟ್ಟ ಇತ್ತು. ನಂತರದ ವರ್ಷಗಳಲ್ಲಿ ಬೇಸಗೆಯಲ್ಲಿ ಮಳೆ ಸುರಿದ ಪರಿಣಾಮ ನಗರದಲ್ಲಿ ನೀರಿನ ಸಮಸ್ಯೆ ಬಂದಿರಲಿಲ್ಲ. ಆದರೆ, ಈ ಬಾರಿ ಬೇಸಗೆಯಲ್ಲಿ ಮಳೆಯೇ ಸುರಿದಿಲ್ಲ. ಇದರಿಂದಾಗಿ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಪ್ರಮಾಣ ತೀವ್ರ ಕುಸಿದಿದೆ. ಮೇ 5ರಂದು ನೀರಿನ ಪ್ರಮಾಣ 4.10 ಮೀ.ಗೆ ಇಳಿಕೆ ಕಂಡಿದೆ. ತುಂಬೆ ಕೆಳ ಭಾಗದಲ್ಲಿ ಹೊಸತಾಗಿ ಅಡ್ಯಾರ್ ನಲ್ಲಿ ಮಾಡಿರುವ ಅಣೆಕಟ್ಟಿನಿಂದ ನೀರೆತ್ತುವ ಕೆಲಸ ಆಗುತ್ತಿದೆ. ಆದರೂ ಎರಡು ವಾರಗಳಿಗೆ ಬೇಕಾಗುವಷ್ಟು ಮಾತ್ರ ನೀರಿದೆ.

2016ರಲ್ಲಿಯೂ ಮಂಗಳೂರಿನಲ್ಲಿ ಹಿಂದೆಂದೂ ಕಂಡರಿಯದ ಭೀಕರ ನೀರಿನ ಕೊರತೆ ಉಂಟಾಗಿತ್ತು. ತುಂಬೆ ಡ್ಯಾಂನಲ್ಲಿ ನೀರಿಲ್ಲದೆ, ನಗರದಲ್ಲಿ ಟ್ಯಾಂಕರ್ ನೀರು ಪೂರೈಸಲಾಗಿತ್ತು. ಕೊನೆಗೆ ಕುದುರೆಮುಖದ ಲಕ್ಯಾ ಡ್ಯಾಂ ನೀರನ್ನು ತರಿಸಲಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ 2017ರಲ್ಲಿ ಪ್ರತಿ 48 ಗಂಟೆ ನಿರಂತರ ನೀರು ಪೂರೈಕೆ ಮಾಡಿದರೆ, ಬಳಿಕದ 36 ಗಂಟೆ ನೀರು ಪೂರೈಕೆ ಸ್ಥಗಿತಗೊಳಿಸುವ ಮೂಲಕ ರೇಷನಿಂಗ್ ಆರಂಭಿಸಿತ್ತು. ಇದೀಗ ದಿನ ಬಿಟ್ಟು ದಿನಕ್ಕೆ ನೀರು ಪೂರೈಸುತ್ತಿದ್ದು ಇದರಿಂದ ಎತ್ತರದ ಪ್ರದೇಶಗಳಿಗೆ ನೀರು ತಲುಪುವುದಿಲ್ಲ. ಪೈಪ್ ನಲ್ಲಿ ಗಾಳಿ ತುಂಬುವುದರಿಂದ ಕೆಲವು ಪ್ರದೇಶಕ್ಕೆ ನೀರು ಸರಬರಾಜು ಆಗುತ್ತಲ್ಲ ಎಂಬ ದೂರು ಕೇಳಿಬಂದಿದೆ.
ಈ ನಡುವೆ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಕಾಲೇಜು ತರಗತಿಗಳಿಗೂ ತಟ್ಟಿದೆ. ಎರಡೂ ಜಿಲ್ಲೆಗಳಲ್ಲಿ ಬಹುತೇಕ ಕಾಲೇಜುಗಳಿಗೆ ನೀರು ಸರಬರಾಜು ಸಮಸ್ಯೆ ಕಾಡುತ್ತಿದೆ. ಹಾಸ್ಟೆಲ್ ಹೊಂದಿರುವ ಕಾಲೇಜುಗಳಲ್ಲಿ ನೀರಿನ ಕೊರತೆ ಬಹುತೇಕ ಎದುರಾಗಿದೆ.
ಇದೇ ವೇಳೆ, ಕುಡಿಯುವ ನೀರಿನ ಸಮಸ್ಯೆಯಿರುವ ಕಾಲೇಜುಗಳಲ್ಲಿ ಆನ್ಲೈನ್ ತರಗತಿ ನಡೆಸಲು ಅವಕಾಶ ನೀಡಲಾಗಿದೆ. ಸಂಜೆ 4ರ ವರೆಗೆ ನಡೆಯುತ್ತಿದ್ದ ಕೆಲವು ಕಾಲೇಜುಗಳ ಸಮಯವನ್ನು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ನಡೆಸಲಾಗುತ್ತಿದೆ.
ಮಂಗಳೂರಿನಲ್ಲಿ ಕೆಲವು ದಿನದ ಹಿಂದೆ 3 ದಿನ ನೀರಿನ ಪೂರೈಕೆ ಸ್ಥಗಿತವಾಗಿದ್ದ ಕಾರಣದಿಂದ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಆನ್ಲೈನ್ ತರಗತಿ ನಡೆಸಲಾಗಿತ್ತು. ಬಳಿಕ ಟ್ಯಾಂಕರ್ ನೀರು ತರಿಸಿ ತರಗತಿ ನಡೆಸಲಾಗಿತ್ತು. ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಸ್ಥಳೀಯಾಡಳಿತದ ನೀರಿನ ವ್ಯವಸ್ಥೆ ಸರಿಯಾಗಿ ಲಭ್ಯವಿಲ್ಲದ ಕಾರಣದಿಂದ ಟ್ಯಾಂಕರ್ ನೀರನ್ನೇ ಆಶ್ರಯಿಸುವಂತಾಗಿದೆ.
Water scarcity third time after 2016 and 2019 in Mangalore, water for two weeks for city left in dam, colleges in city face trouble.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am