ಬ್ರೇಕಿಂಗ್ ನ್ಯೂಸ್
28-10-20 02:57 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿರುವ ಗುಜರಾತ್, ರಾಜಸ್ಥಾನ ಮೂಲದ ಮಾರ್ವಾಡಿಗಳನ್ನು ಓಡಿಸಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಪರ - ವಿರೋಧ ಕೇಳಿಬಂದಿದ್ದು ಶಾಂತಿ ಕದಡುವ ಮುನ್ನ ಪೊಲೀಸರು ಎಚ್ಚೆತ್ತುಕೊಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಮಾರ್ವಾಡಿ ಹಟಾವೋ ಅಭಿಯಾನ ಆರಂಭಿಸಿದ್ದಾರೆ. ನಮ್ಮೂರು ನಮ್ಮ ಜನ, ನಮ್ಮ ವ್ಯಾಪಾರ ನಮ್ಮ ಜನರಿಗೆ... ಮಾರ್ವಾಡಿ ಹಠಾವೋ.. ಎಂಬ ಪೋಸ್ಟ್ ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ. ಇದು ಮಾರ್ವಾಡಿಗಳ ಗಮನಕ್ಕೂ ಬಂದಿದ್ದು, ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಮಾರ್ವಾಡಿ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನದ ಹಿಂದೆ ಮುಸ್ಲಿಂ ವರ್ತಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹಿಂದು ಸಂಘಟನೆಗಳೂ ಎಂಟ್ರಿ ಕೊಟ್ಟಿವೆ.


ರಾಜಸ್ಥಾನ ವ್ಯಾಪಾರಿಗಳ ಪರವಾಗಿ ಹಿಂದೂ ಸಂಘಟನೆಗಳು ಬೆಂಬಲ ನೀಡಿವೆ. ಕೆಲವು ಕಾರ್ಯಕರ್ತರು ಬಹಿರಂಗವಾಗಿಯೇ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕುತ್ತಿದ್ದು ಭಾರತದ ಪ್ರಜೆಗಳಿಗೆ ದೇಶದ ಎಲ್ಲಿ ಬೇಕಾದರೂ ವ್ಯಾಪಾರ ಮಾಡಲು ಅವಕಾಶವಿದೆ. ಅವರು ಬಾಂಗ್ಲಾ ದೇಶಿಗರಲ್ಲ. ಪಾಕಿಸ್ತಾನದವರೂ ಅಲ್ಲ.. ನಮ್ಮದೇ ಜನ ಎಂದು ಪ್ರತಿ ಟೀಕೆ ಮಾಡುತ್ತಿದ್ದಾರೆ.
ಇದೇ ವೇಳೆ, ಇಂಥ ಪೋಸ್ಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ. ರಾಜಸ್ಥಾನ ಮೂಲದ ವ್ಯಾಪಾರಿಗಳು ಮೋಸ ಮಾಡುತ್ತಾರೆ ಎಂಬ ವೀಡಿಯೋ ಹರಿಬಿಟ್ಟು ಜನರನ್ನು ಕೆರಳಿಸುವ ಯತ್ನ ನಡೆದಿದ್ದು ಇದರಿಂದಾಗಿ ಗೊಂದಲ, ಅಭಿಯಾನ ಶುರುವಾಗಿದೆ ಎನ್ನಲಾಗುತ್ತಿದೆ.
Marvadis who are living in the parts of Karavali Karnataka should be chased groups start campaign on social media.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm