ಬ್ರೇಕಿಂಗ್ ನ್ಯೂಸ್
28-10-20 02:57 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿರುವ ಗುಜರಾತ್, ರಾಜಸ್ಥಾನ ಮೂಲದ ಮಾರ್ವಾಡಿಗಳನ್ನು ಓಡಿಸಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಪರ - ವಿರೋಧ ಕೇಳಿಬಂದಿದ್ದು ಶಾಂತಿ ಕದಡುವ ಮುನ್ನ ಪೊಲೀಸರು ಎಚ್ಚೆತ್ತುಕೊಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಮಾರ್ವಾಡಿ ಹಟಾವೋ ಅಭಿಯಾನ ಆರಂಭಿಸಿದ್ದಾರೆ. ನಮ್ಮೂರು ನಮ್ಮ ಜನ, ನಮ್ಮ ವ್ಯಾಪಾರ ನಮ್ಮ ಜನರಿಗೆ... ಮಾರ್ವಾಡಿ ಹಠಾವೋ.. ಎಂಬ ಪೋಸ್ಟ್ ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ. ಇದು ಮಾರ್ವಾಡಿಗಳ ಗಮನಕ್ಕೂ ಬಂದಿದ್ದು, ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಮಾರ್ವಾಡಿ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನದ ಹಿಂದೆ ಮುಸ್ಲಿಂ ವರ್ತಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹಿಂದು ಸಂಘಟನೆಗಳೂ ಎಂಟ್ರಿ ಕೊಟ್ಟಿವೆ.


ರಾಜಸ್ಥಾನ ವ್ಯಾಪಾರಿಗಳ ಪರವಾಗಿ ಹಿಂದೂ ಸಂಘಟನೆಗಳು ಬೆಂಬಲ ನೀಡಿವೆ. ಕೆಲವು ಕಾರ್ಯಕರ್ತರು ಬಹಿರಂಗವಾಗಿಯೇ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕುತ್ತಿದ್ದು ಭಾರತದ ಪ್ರಜೆಗಳಿಗೆ ದೇಶದ ಎಲ್ಲಿ ಬೇಕಾದರೂ ವ್ಯಾಪಾರ ಮಾಡಲು ಅವಕಾಶವಿದೆ. ಅವರು ಬಾಂಗ್ಲಾ ದೇಶಿಗರಲ್ಲ. ಪಾಕಿಸ್ತಾನದವರೂ ಅಲ್ಲ.. ನಮ್ಮದೇ ಜನ ಎಂದು ಪ್ರತಿ ಟೀಕೆ ಮಾಡುತ್ತಿದ್ದಾರೆ.
ಇದೇ ವೇಳೆ, ಇಂಥ ಪೋಸ್ಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ. ರಾಜಸ್ಥಾನ ಮೂಲದ ವ್ಯಾಪಾರಿಗಳು ಮೋಸ ಮಾಡುತ್ತಾರೆ ಎಂಬ ವೀಡಿಯೋ ಹರಿಬಿಟ್ಟು ಜನರನ್ನು ಕೆರಳಿಸುವ ಯತ್ನ ನಡೆದಿದ್ದು ಇದರಿಂದಾಗಿ ಗೊಂದಲ, ಅಭಿಯಾನ ಶುರುವಾಗಿದೆ ಎನ್ನಲಾಗುತ್ತಿದೆ.
Marvadis who are living in the parts of Karavali Karnataka should be chased groups start campaign on social media.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm