ಬ್ರೇಕಿಂಗ್ ನ್ಯೂಸ್
28-10-20 02:57 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿರುವ ಗುಜರಾತ್, ರಾಜಸ್ಥಾನ ಮೂಲದ ಮಾರ್ವಾಡಿಗಳನ್ನು ಓಡಿಸಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಪರ - ವಿರೋಧ ಕೇಳಿಬಂದಿದ್ದು ಶಾಂತಿ ಕದಡುವ ಮುನ್ನ ಪೊಲೀಸರು ಎಚ್ಚೆತ್ತುಕೊಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಮಾರ್ವಾಡಿ ಹಟಾವೋ ಅಭಿಯಾನ ಆರಂಭಿಸಿದ್ದಾರೆ. ನಮ್ಮೂರು ನಮ್ಮ ಜನ, ನಮ್ಮ ವ್ಯಾಪಾರ ನಮ್ಮ ಜನರಿಗೆ... ಮಾರ್ವಾಡಿ ಹಠಾವೋ.. ಎಂಬ ಪೋಸ್ಟ್ ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ. ಇದು ಮಾರ್ವಾಡಿಗಳ ಗಮನಕ್ಕೂ ಬಂದಿದ್ದು, ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಮಾರ್ವಾಡಿ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನದ ಹಿಂದೆ ಮುಸ್ಲಿಂ ವರ್ತಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹಿಂದು ಸಂಘಟನೆಗಳೂ ಎಂಟ್ರಿ ಕೊಟ್ಟಿವೆ.


ರಾಜಸ್ಥಾನ ವ್ಯಾಪಾರಿಗಳ ಪರವಾಗಿ ಹಿಂದೂ ಸಂಘಟನೆಗಳು ಬೆಂಬಲ ನೀಡಿವೆ. ಕೆಲವು ಕಾರ್ಯಕರ್ತರು ಬಹಿರಂಗವಾಗಿಯೇ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕುತ್ತಿದ್ದು ಭಾರತದ ಪ್ರಜೆಗಳಿಗೆ ದೇಶದ ಎಲ್ಲಿ ಬೇಕಾದರೂ ವ್ಯಾಪಾರ ಮಾಡಲು ಅವಕಾಶವಿದೆ. ಅವರು ಬಾಂಗ್ಲಾ ದೇಶಿಗರಲ್ಲ. ಪಾಕಿಸ್ತಾನದವರೂ ಅಲ್ಲ.. ನಮ್ಮದೇ ಜನ ಎಂದು ಪ್ರತಿ ಟೀಕೆ ಮಾಡುತ್ತಿದ್ದಾರೆ.
ಇದೇ ವೇಳೆ, ಇಂಥ ಪೋಸ್ಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ. ರಾಜಸ್ಥಾನ ಮೂಲದ ವ್ಯಾಪಾರಿಗಳು ಮೋಸ ಮಾಡುತ್ತಾರೆ ಎಂಬ ವೀಡಿಯೋ ಹರಿಬಿಟ್ಟು ಜನರನ್ನು ಕೆರಳಿಸುವ ಯತ್ನ ನಡೆದಿದ್ದು ಇದರಿಂದಾಗಿ ಗೊಂದಲ, ಅಭಿಯಾನ ಶುರುವಾಗಿದೆ ಎನ್ನಲಾಗುತ್ತಿದೆ.
Marvadis who are living in the parts of Karavali Karnataka should be chased groups start campaign on social media.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm