ಬ್ರೇಕಿಂಗ್ ನ್ಯೂಸ್
08-05-23 10:18 pm Mangalore Correspondent ಕರಾವಳಿ
ಮಂಗಳೂರು, ಮೇ 8 : ರಾಜ್ಯದಲ್ಲಿ ಸಂಪೂರ್ಣ ಗೋಹತ್ಯಾ ನಿಷೇಧವನ್ನು ರಾಜ್ಯದ ಬಿಜೆಪಿ ಸರಕಾರ ಜಾರಿಗೆ ತಂದಿದ್ದರೂ, ಗೋಕಟುಕರು ಅದನ್ನು ಉಲ್ಲಂಘಿಸಿ ಗೋಹತ್ಯೆ ನಿರಂತರವಾಗಿ ಮಾಡುತ್ತಾ ಬಂದಿದ್ದರು. ಉತ್ತರ ಕ್ಷೇತ್ರದಲ್ಲಿ ಮೂರು ಕಡೆ ಅವ್ಯಾಹತವಾಗಿ ಗೋಹತ್ಯೆ ನಡೆಯುತ್ತಿರುವುದು ಗಮನಕ್ಕೆ ಬಂದ ತಕ್ಷಣ ಶಾಸಕ ಡಾ. ಭರತ್ ಶೆಟ್ಟಿ ಅದನ್ನು ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆಯಡಿ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಸೂಚಿಸಿದ್ದರು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಂಡಿದ್ದರು. ಈ ಧೈರ್ಯವನ್ನು ರಾಜ್ಯದಲ್ಲಿ ತೋರಿಸಿದ ಮೊದಲ ಶಾಸಕ ಡಾ.ಭರತ್ ಶೆಟ್ಟಿ ಎಂದು ಮಂಗಳೂರು ನಗರ ಉತ್ತರ ಬಿಜೆಪಿ ಮಂಡಲದ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಹೇಳಿದ್ದಾರೆ.
ಅವರು ಕ್ಷೇತ್ರವ್ಯಾಪಿ ಪ್ರಚಾರದಲ್ಲಿ ನಿರತರಾಗಿದ್ದಾಗ ಭೇಟಿಯಾದ ವರದಿಗಾರರೊಂದಿಗೆ ಮಾತನಾಡುತ್ತಾ ಈ ಅನಿಸಿಕೆ ವ್ಯಕ್ತಪಡಿಸಿದ್ದರು. ಗೋಹಂತಕರಿಗೆ ಬಿಸಿ ಮುಟ್ಟಿಸುವ ಅಗತ್ಯ ಇತ್ತು. ಅವರು ಕಾಯ್ದೆ, ಕಾನೂನು, ನಿಯಮಗಳನ್ನು ಕ್ಯಾರೇ ಮಾಡುತ್ತಿರಲಿಲ್ಲ. ಅಂತವರನ್ನು ಕಾನೂನಿನ ಪರಿಧಿಯೊಳಗೆ ತರಲು ಧೈರ್ಯ, ಸಾಹಸ ಬೇಕು. ಅದನ್ನು ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ತೋರಿಸಿದ್ದಾರೆ. ಇದರ ನಂತರ ಜಿಲ್ಲೆಯಲ್ಲಿ ಅಕ್ರಮ ಕಸಾಯಿಗಳ ವಿರುದ್ಧ ಧ್ವನಿ ಪ್ರಬಲವಾಯಿತು ಎಂದು ಅವರು ತಿಳಿಸಿದರು.
ಒಬ್ಬ ಶಾಸಕ ಸರಕಾರದ ನಿಯಮಗಳನ್ನು ಅನುಸರಿಸಿ ಏನೆಲ್ಲಾ ಮಾಡಲು ಸಾಧ್ಯವಿದೆ ಎಂದು ತೋರಿಸಿಕೊಟ್ಟವರು ಡಾ. ಭರತ್ ಶೆಟ್ಟಿ. ಅವರು ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿಸಿದ ನಂತರ ಅವರಿಗೆ ಮತಾಂಧರ ಬೆದರಿಕೆ ಕರೆಗಳು, ಒತ್ತಡ ಎಲ್ಲವೂ ಬಂದಿದೆ. ಆದರೂ ಎದೆಗುಂದದೆ ಅವರು ತಮ್ಮ ನಿಲುವಿನಲ್ಲಿ ಅಚಲರಾಗಿ ನಿಂತು ಮುನ್ನುಗ್ಗಿದ್ದಾರೆ. ಈ ಮೂಲಕ ರಾಜ್ಯ ಸರಕಾರ ಜಾರಿಗೆ ತಂದ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತಂದು ಗೋಪ್ರೇಮಿಗಳಲ್ಲಿ ಭರವಸೆ ಮೂಡಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ತಲವಾರು ತೋರಿಸಿ ಮನೆಗಳ ಕೊಟ್ಟಿಗೆಯಿಂದ ಗೋವುಗಳನ್ನು ಎಳೆದುಕೊಂಡ ಹೋದ ಒಂದೇ ಒಂದು ಉದಾಹರಣೆ ಇಲ್ಲ. ಅದಕ್ಕೆ ಮುಖ್ಯ ಕಾರಣ ಭರತ್ ಶೆಟ್ಟಿಯವರ ದಕ್ಷ ಆಡಳಿತ.
ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಯಾವುದೇ ಹಸ್ತಕ್ಷೇಪ ಮಾಡದೇ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವಂತೆ ಮಾಡಿದ್ದಾರೆ. ಇನ್ನು ಹಿಂದುತ್ವದೊಂದಿಗೆ ಅಭಿವೃದ್ಧಿಯನ್ನು ಕೂಡ ಶಾಸಕ ಡಾ. ಭರತ್ ಶೆಟ್ಟಿ ವೈಯವರು ಜೊತೆ ಜೊತೆಯಾಗಿ ತೆಗೆದುಕೊಂಡಿದ್ದಾರೆ. ಅದಕ್ಕೆ ಕ್ಷೇತ್ರದಲ್ಲಿ ಆಗಿರುವ 2,250 ಕೋಟಿ ರೂ ಅಭಿವೃದ್ಧಿ ಯೋಜನೆಗಳೇ ಸಾಕ್ಷಿ. ಇಂತಹ ಶಾಸಕರನ್ನು ಜನ ಮತ್ತೊಮ್ಮೆ ಆರಿಸಲು ಬಯಸುತ್ತಿದ್ದಾರೆ ಎಂದು ತಿಲಕರಾಜ್ ಕೃಷ್ಣಾಪುರ ಹೇಳಿದ್ದಾರೆ.
Mangalore MLA Bharath Shetty plays major role in passing anti cow slaughter law in Karnataka says North BJP President Tilikraj Krishnapura.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm