ಬ್ರೇಕಿಂಗ್ ನ್ಯೂಸ್
09-05-23 04:51 pm Mangalore Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 05:45 pm
HK News Staffer
ಉಳ್ಳಾಲ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆ ; ಫ್...
15-05-26 12:21 pm
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm