ಬ್ರೇಕಿಂಗ್ ನ್ಯೂಸ್
 
            
                        09-05-23 04:51 pm Mangalore Correspondent ಕರಾವಳಿ
 
            ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
 
            
            
            Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm