ಬ್ರೇಕಿಂಗ್ ನ್ಯೂಸ್
09-05-23 04:51 pm Mangalore Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm