ಬ್ರೇಕಿಂಗ್ ನ್ಯೂಸ್
09-05-23 04:51 pm Mangalore Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm