ಬ್ರೇಕಿಂಗ್ ನ್ಯೂಸ್
09-05-23 04:51 pm Mangalore Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm