ಬ್ರೇಕಿಂಗ್ ನ್ಯೂಸ್
 
            
                        09-05-23 05:24 pm Mangalore Correspondent ಕರಾವಳಿ
 
            ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
 
            
            
            Mangalore Miscreants steal womens undergarments and costly dress, place condoms on house main door and flee in Ullal.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm