ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm