ಬ್ರೇಕಿಂಗ್ ನ್ಯೂಸ್
05-08-20 10:46 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 5: ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರ ಸಂಘಟನೆಗಳು ಸ್ಕೆಚ್ ರೂಪಿಸಿದ್ದು ಕರ್ನಾಟಕ ಸೇರಿ ಕರಾವಳಿಯಾದ್ಯಂತ ಹೈ ಎಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ರವಾನಿಸಿದೆ.
ಸಿರಿಯಾ ಮೂಲದ ಐಎಸ್ಐಎಲ್ ಉಗ್ರ ಸಂಘಟನೆಯ ಭಾರತದ ವಿಭಾಗ ' ಹಿಂದ್ ವಿಲಾಯತ್ ' ಹಾಗೂ ಅಲ್ ಖೈದಾ ಉಗ್ರರು ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಕೊರೊನಾ ಸಂಕಷ್ಟದ ಸಂದರ್ಭವನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯ ಎಸಗಲು ತಮ್ಮ ಸ್ಲೀಪರ್ ಸೆಲ್ ಗಳಿಗೆ ಈ ಉಗ್ರ ಸಂಘಟನೆಗಳು ನಿರ್ದೇಶನ ನೀಡಿವೆ ಎಂದು ಹೇಳಲಾಗಿದೆ.
ಉಗ್ರರ ಸಂಚು ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಮ ಮಂದಿರ ಭೂಮಿಪೂಜೆಯ ಸಂಭ್ರಮಾಚರಣೆ ವೇಳೆ ಹಾಗು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಪಡೆ ರಾಜ್ಯಕ್ಕೆ ರವಾನಿಸಿದ ಸಂದೇಶದಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಡಲ ತಡಿಯಲ್ಲಿ ನಡೆಯುವ ಯಾವುದೇ ಅಸ್ವಾಭಾವಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಸಮುದ್ರ ಮತ್ತು ಕಡಲ ತೀರದ ಚಟುವಟಿಕೆ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm