ಬ್ರೇಕಿಂಗ್ ನ್ಯೂಸ್
10-05-23 12:36 pm Udupi Correspondent ಕರಾವಳಿ
ಉಡುಪಿ, ಮೇ 10: ಈ ಬಾರಿ ಮತ ಚಲಾವಣೆಗೆ ಹಿಂದಿಗಿಂತ ಹೆಚ್ಚು ಹುರುಪು ಬಂದ ಹಾಗಿದೆ. ಇಲ್ಲೊಬ್ಬಳು ಮಧುಮಗಳು ಹಸೆಮಣೆಗೆ ಕಾಲಿಡುವ ಮೊದಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.
ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯಿತಿ ಅವರಾಲು ಮಟ್ಟು ಎಂಬಲ್ಲಿನ ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಬೆಳಗ್ಗಿನ ಹೊತ್ತಲ್ಲೇ ಮತ ಚಲಾಯಿಸಿ ಮಾದರಿಯಾಗಿದ್ದಾರೆ.
ಮದುವೆಗೆ ಹೋಗುವ ಮಹಿಳೆಯರೂ ಆಕರ್ಷಕ ಸೀರೆಗಳನ್ನು ಉಟ್ಟು ಬೆಳಗ್ಗೆಯೇ ಸರತಿ ಸಾಲಿನಲ್ಲಿ ನಿಂತಿದ್ದರು. ಮದುವೆ ಮಂಟಪಕ್ಕೆ ಹೋಗಿ ಹಕ್ಕು ಚಲಾಯಿಸುವುದು ಮಿಸ್ ಆಗಬಾರದೆಂದು ಮಹಿಳೆಯರ ಸಾಲು ಕೆಲವೆಡೆ ಮಾರುದ್ದ ಇತ್ತು.
ತಾಳಿಕಟ್ಟುವ ಮುನ್ನ ಮತ ಚಲಾಯಿಸಿದ ಮದುಮಗ;
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಪ್ಪನಾಯಕ ನಗರ ಬಡಾವಣೆಯ ನಾರಾಯಣ ಅವರ ಪುತ್ರ ವಿನೋದ್ ಕುಮಾರ್ ಮದುವೆ ಮಂಟಪಕ್ಕೆ ಹೊರಡುವ ಮುನ್ನ ಮತ ಚಲಾಯಿಸಿದ್ದಾರೆ.
ವಿನೋದ್ ಅವರ ವಿವಾಹ ರಿಪ್ಪನ್ ಪೇಟೆಯಲ್ಲಿ ಪಲ್ಲವಿ ಅವರೊಂದಿಗೆ ಬುಧವಾರ ನಡೆಯುವುದೆಂದು ನಿಶ್ಚಯವಾಗಿತ್ತು.ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೆ ಮದುವೆ ದಿನಾಂಕ ನಿಗದಿಯಾಗಿತ್ತು.
ಮದುವೆ ದಿನವೆ ಚುನಾವಣೆ ದಿನ ಎಂದು ತಿಳಿದು ಆರಂಭದಲ್ಲಿ ಬೇಸರವಾಗಿತ್ತು.ಆದರೆ ನಾನು ನನ್ನ ಕುಟುಂಬದ ಎಲ್ಲರೂ ಬೆಳಿಗ್ಗೆ ಯೆ ಮತ ಚಲಾಯಿಸಿ ಮದುವೆಗೆ ಹೊರಟಿದ್ದೇವೆ. ನಮ್ಮ ಹಕ್ಕನ್ನು ನಾವು ಮರೆಯಬಾರದು ಎಂದು ವಿನೋದ್ ತಿಳಿಸಿದ್ದಾರೆ
ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ.
Karnataka election 2023, brides visit polling booths on their wedding day at Udupi and Chikmagalur to cast their votes before their wedding. The bridegroom from Sagar, Shivamogga, cast his vote before reaching the marriage hall.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm