ಬ್ರೇಕಿಂಗ್ ನ್ಯೂಸ್
10-05-23 12:36 pm Udupi Correspondent ಕರಾವಳಿ
ಉಡುಪಿ, ಮೇ 10: ಈ ಬಾರಿ ಮತ ಚಲಾವಣೆಗೆ ಹಿಂದಿಗಿಂತ ಹೆಚ್ಚು ಹುರುಪು ಬಂದ ಹಾಗಿದೆ. ಇಲ್ಲೊಬ್ಬಳು ಮಧುಮಗಳು ಹಸೆಮಣೆಗೆ ಕಾಲಿಡುವ ಮೊದಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.
ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯಿತಿ ಅವರಾಲು ಮಟ್ಟು ಎಂಬಲ್ಲಿನ ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಬೆಳಗ್ಗಿನ ಹೊತ್ತಲ್ಲೇ ಮತ ಚಲಾಯಿಸಿ ಮಾದರಿಯಾಗಿದ್ದಾರೆ.
ಮದುವೆಗೆ ಹೋಗುವ ಮಹಿಳೆಯರೂ ಆಕರ್ಷಕ ಸೀರೆಗಳನ್ನು ಉಟ್ಟು ಬೆಳಗ್ಗೆಯೇ ಸರತಿ ಸಾಲಿನಲ್ಲಿ ನಿಂತಿದ್ದರು. ಮದುವೆ ಮಂಟಪಕ್ಕೆ ಹೋಗಿ ಹಕ್ಕು ಚಲಾಯಿಸುವುದು ಮಿಸ್ ಆಗಬಾರದೆಂದು ಮಹಿಳೆಯರ ಸಾಲು ಕೆಲವೆಡೆ ಮಾರುದ್ದ ಇತ್ತು.

ತಾಳಿಕಟ್ಟುವ ಮುನ್ನ ಮತ ಚಲಾಯಿಸಿದ ಮದುಮಗ;
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಪ್ಪನಾಯಕ ನಗರ ಬಡಾವಣೆಯ ನಾರಾಯಣ ಅವರ ಪುತ್ರ ವಿನೋದ್ ಕುಮಾರ್ ಮದುವೆ ಮಂಟಪಕ್ಕೆ ಹೊರಡುವ ಮುನ್ನ ಮತ ಚಲಾಯಿಸಿದ್ದಾರೆ.
ವಿನೋದ್ ಅವರ ವಿವಾಹ ರಿಪ್ಪನ್ ಪೇಟೆಯಲ್ಲಿ ಪಲ್ಲವಿ ಅವರೊಂದಿಗೆ ಬುಧವಾರ ನಡೆಯುವುದೆಂದು ನಿಶ್ಚಯವಾಗಿತ್ತು.ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೆ ಮದುವೆ ದಿನಾಂಕ ನಿಗದಿಯಾಗಿತ್ತು.
ಮದುವೆ ದಿನವೆ ಚುನಾವಣೆ ದಿನ ಎಂದು ತಿಳಿದು ಆರಂಭದಲ್ಲಿ ಬೇಸರವಾಗಿತ್ತು.ಆದರೆ ನಾನು ನನ್ನ ಕುಟುಂಬದ ಎಲ್ಲರೂ ಬೆಳಿಗ್ಗೆ ಯೆ ಮತ ಚಲಾಯಿಸಿ ಮದುವೆಗೆ ಹೊರಟಿದ್ದೇವೆ. ನಮ್ಮ ಹಕ್ಕನ್ನು ನಾವು ಮರೆಯಬಾರದು ಎಂದು ವಿನೋದ್ ತಿಳಿಸಿದ್ದಾರೆ

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ.
Karnataka election 2023, brides visit polling booths on their wedding day at Udupi and Chikmagalur to cast their votes before their wedding. The bridegroom from Sagar, Shivamogga, cast his vote before reaching the marriage hall.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm