ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.


ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.


ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm