ಬ್ರೇಕಿಂಗ್ ನ್ಯೂಸ್
10-05-23 10:35 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ ಕಲ್ಲೆಸೆತ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಪ್ರದೇಶವನ್ನು ತಮ್ಮ ಸುಪರ್ದಿಗೆ ಪಡೆದಿದ್ದು ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿದ್ದಾರೆ. ಸ್ಥಳಕ್ಕೆ ಭೇಟಿಯಿತ್ತ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹೇರಿದ್ದಾರೆ.
ಮೂಡುಬಿದ್ರೆ ಮತಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಮತಗಟ್ಟೆ ಒಂದಕ್ಕೆ ಸಂಜೆ ವೇಳೆಗೆ ಮಿಥುನ್ ರೈ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಸಂಜೆ ಏಳು ಗಂಟೆ ವೇಳೆಗೆ ಅಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಈ ವೇಳೆ, ಮಿಥುನ್ ರೈ ಕಾರು ನಿಲ್ಲಿಸಿದ್ದು ಜೊತೆಗಿದ್ದ ಬೆಂಬಲಿಗರು ಕಾಂಗ್ರೆಸ್ ಜೈಕಾರ ಹಾಕಿದ್ದಾರೆ. ಕೂಡಲೇ ಎರಡೂ ಕಡೆಯಲ್ಲಿ ಗುಂಪು ಜಮಾವಣೆ ಆಗಿದ್ದು ಕಾರ್ಯಕರ್ತರು ಪರಸ್ಪರ ವಿರುದ್ಧ ಘೋಷಣೆ ಕೂಗಿದ್ದಾರೆ. ಎರಡು ತಂಡಗಳ ಮಧ್ಯೆ ವಾಗ್ವಾದ, ತಳ್ಳಾಟ ನಡೆಯುತ್ತಿದ್ದಾಗಲೇ ಕಲ್ಲು ತೂರಾಟ ಆಗಿದ್ದು ಮೂವರು ಕಾಂಗ್ರೆಸ್ ಕಾರ್ಯಕರ್ತರು ಏಟು ಬಿದ್ದು ಗಾಯಗೊಂಡಿದ್ದಾರೆ.



ಆನಂತರ, ಸ್ಥಳದಲ್ಲಿ ಪೊಲೀಸರು ಜಮಾವಣೆಗೊಂಡು ಎರಡೂ ತಂಡಗಳು ಜಗಳ ನಡೆಸದಂತೆ ತಡೆದಿದ್ದಾರೆ. ಕಾರ್ಯಕರ್ತರ ರಂಪಾಟ ಎಷ್ಟಿತ್ತು ಎಂದರೆ, ಹೊಡೆದಾಡಲು ನುಗ್ಗಿ ಬರುತ್ತಿದ್ದರು. ಪೊಲೀಸರು ಕೈ ಕೈ ಹಿಡಿದು ಅಡ್ಡಕ್ಕೆ ತಡೆಬೇಲಿಯಾಗಿ ನಿಂತು ಕಾರ್ಯಕರ್ತರು ಘರ್ಷಣೆ ನಡೆಸದಂತೆ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಬಳಿಕ ಪೊಲೀಸ್ ಕಮಿಷನರ್ ಸ್ಥಳಕ್ಕೆ ಬಂದು ಸ್ಥಳದಲ್ಲಿ ಕೆಎಸ್ ಆರ್ ಪಿ ಪಡೆಯನ್ನು ನಿಯೋಜಿಸಿದ್ದಾರೆ.




ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕಮಿಷನರ್ ಕುಲದೀಪ್ ಜೈನ್, ಘಟನೆ ಹಿನ್ನೆಲೆಯಲ್ಲಿ ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದೇವೆ. ಮೂಡುಶೆಡ್ಡೆಗೆ ಹೊರಭಾಗದ ಜನರು ಬರದಂತೆ ಚೆಕ್ ಪೋಸ್ಟ್ ಹಾಕಿದ್ದೇವೆ ಎಂದರು. ಕಾರ್ಯಕರ್ತರು ಘೋಷಣೆ ಕೂಗಿದ ಕಾರಣಕ್ಕೆ ಸಮಸ್ಯೆ ಉಂಟಾಗಿದೆ ಎಂಬ ಮಾಹಿತಿ ಇದೆ. ತನಿಖೆ ನಡೆಸುತ್ತೇವೆ, ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ವಲ್ಪ ಗಾಯವಾಗಿದೆ. ಒಬ್ಬರು ಪೊಲೀಸ್ ಸಿಬಂದಿಗೂ ಕಲ್ಲೇಟಿನಿಂದ ಗಾಯ ಆಗಿದೆ. ಉದ್ರಿಕ್ತ ಗುಂಪನ್ನು ಪೊಲೀಸರು ಚದುರಿಸಿದ್ದಾರೆ, ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದರು.
ಮೋದಿ ಮೋದಿ ಕೂಗಿಗೆ ಕಾಂಗ್ರೆಸ್ ಜೈಕಾರ ; ಮಿಥುನ್ ರೈ ಕಾರಿಗೆ ಕಲ್ಲು, ಮೂಡುಶೆಡ್ಡೆ ಉದ್ವಿಗ್ನ
Mangalore Moodushedde stone pelted on Mithun Rai car, fight between Congress BJP, 144 section imposed in Kavoor limits. Tension erupted at Moodushedde gram panchayath limits as a scuffle broke out between workers of the Bharatiya Janata Party (BJP) and the Congress on Wednesday, .The incident occurred during the visit of Congress candidate Mithun Rai to the area, leading to a clash between Congress workers and BJP
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm