ಬ್ರೇಕಿಂಗ್ ನ್ಯೂಸ್
13-05-23 03:03 pm Udupi Correspondent ಕರಾವಳಿ
ಉಡುಪಿ, ಮೇ 13: ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಕಮಲ ಪಾಳಯದ ಕೈ ಹಿಡಿದಿದ್ದು, ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ಸುನೀಲ್ ಕುಮಾರ್ ಹೊರತು ಪಡಿಸಿ ಉಳಿದ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ ಹಾಕಿತ್ತು.
ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬಿಜೆಪಿ ಬಾವುಟ ಹಾರಿಸಿದ್ದಾರೆ.
ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಮತ್ತೊಮ್ಮೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ.
ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರ ಮತ್ತೊಂದು ಪ್ರಯತ್ನಕ್ಕೆ ಸೋಲಾಗಿದೆ.
Udupi major victory for BJP in all 5 constituency, new faces Yashpal Suvarna, Gururaj Shetty Gantihole, Gurme Suresh Shetty,Kiran Kumar Kodgi make impact. BJP leads in 11 out of 13 constituencies of DK-Udupi twin districts
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm