ಬ್ರೇಕಿಂಗ್ ನ್ಯೂಸ್
13-05-23 03:03 pm Udupi Correspondent ಕರಾವಳಿ
ಉಡುಪಿ, ಮೇ 13: ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಕಮಲ ಪಾಳಯದ ಕೈ ಹಿಡಿದಿದ್ದು, ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ಸುನೀಲ್ ಕುಮಾರ್ ಹೊರತು ಪಡಿಸಿ ಉಳಿದ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ ಹಾಕಿತ್ತು.
ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬಿಜೆಪಿ ಬಾವುಟ ಹಾರಿಸಿದ್ದಾರೆ.
ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಮತ್ತೊಮ್ಮೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ.
ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರ ಮತ್ತೊಂದು ಪ್ರಯತ್ನಕ್ಕೆ ಸೋಲಾಗಿದೆ.
Udupi major victory for BJP in all 5 constituency, new faces Yashpal Suvarna, Gururaj Shetty Gantihole, Gurme Suresh Shetty,Kiran Kumar Kodgi make impact. BJP leads in 11 out of 13 constituencies of DK-Udupi twin districts
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm