ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm