ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm