ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆ ; ವಾಕರಿಕೆ ಹಾಕಿದ ಸಾರ್ವಜನಿಕರು 

14-05-23 04:35 pm       Mangalore Correspondent   ಕರಾವಳಿ

ಸಾರ್ವಜನಿಕ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ. ನೀರು ದುರ್ವಾಸನೆ ಬರುತ್ತಿದ್ದುದರಿಂದ ಪರಿಶೀಲಿಸಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಶವ ಪತ್ತೆಯಾಗಿದೆ. ‌

ಬೆಳ್ತಂಗಡಿ, ಮೇ 14: ಸಾರ್ವಜನಿಕ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ. ನೀರು ದುರ್ವಾಸನೆ ಬರುತ್ತಿದ್ದುದರಿಂದ ಪರಿಶೀಲಿಸಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಶವ ಪತ್ತೆಯಾಗಿದೆ. ‌

ಶನಿವಾರ ಬೆಳಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿತ್ತು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ವೇಳೆ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲುತ್ತಿರುವುದು ಕಂಡುಬಂದಿದೆ. ಇದನ್ನು ನೋಡಿದ ಸ್ಥಳೀಯ ಸಾರ್ವಜನಿಕರು ತಾವು ಕುಡಿದ ನೀರಿನ ಬಗ್ಗೆ ಎಣಿಸಿ ವಾಕರಿಕೆ ಹಾಕಿದ್ದಾರೆ. 

ಸ್ಥಳಕ್ಕೆ ಧರ್ಮಸ್ಥಳ‌ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಆತನದ್ದೇ ಮೃತದೇಹವೇ ಎಂಬ ಅನುಮಾನ ವ್ಯಕ್ತವಾಗಿದೆ.

Belthangady decomposed dead body found inside water tank at Kalanja. The incident came to light after dirty smell was around the water tank ane inside the water.