ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am